ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ಆವಿರ್ಭವಿಸಿದ ಮಾತೆ ಕಾವೇರಿ

Subscribe NewsicsKannada/YouTube newsics.com ಮಡಿಕೇರಿ: ಬ್ರಹ್ಮಗಿರಿ ತಪ್ಪಲಿನಲ್ಲಿರುವ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಶುಕ್ರವಾರ ಮಧ್ಯಾಹ್ನ 1.44 ಸಲ್ಲುವ ಮಕರ ಲಗ್ನದಲ್ಲಿ ಮಾತೆ ಕಾವೇರಿಯು ತೀರ್ಥರೂಪಿಣಿಯಾಗಿ ಆವೀರ್ಭವಿಸುವ ಮೂಲಕ ಸಹಸ್ರಾರು ಭಕ್ತರನ್ನು ಪುಳಕಿತರನ್ನಾಗಿಸಿದಳು. ಸೂರ್ಯನು ತುಲಾ ರಾಶಿಯನ್ನು ಪ್ರವೇಶಿಸುವ ತುಲಾ ಸಂಕ್ರಮಣದಂದು ಮಧ್ಯಾಹ್ನ 1.44ರ ನಿಗದಿತ ಸಮಯಕ್ಕೆ ತಾಯಿ ಕಾವೇರಿ ಆವೀರ್ಭವಿಸುವುದರೊಂದಿಗೆ ಭಕ್ತ ಜನರನ್ನು ಹರಸಿದಳು. ಈ ಬಾರಿ ಹಗಲು ವೇಳೆಯಲ್ಲಿ ತೀರ್ಥೋದ್ಭವವಾಗುತ್ತಿರುವ ಹಿನ್ನೆಲೆಯಲ್ಲಿ ಈ ಅಪೂರ್ವ ಘಟನೆಯನ್ನು ಕಣ್ತುಂಬಿಕೊಳ್ಳಲು ಬೆಳಗಿನಿಂದಲೇ ತಲಕಾವೇರಿಯತ್ತ ಅಸಂಖ್ಯಾತ ಭಕ್ತಾದಿಗಳು ಆಗಮಿಸುತ್ತಿದ್ದರು. … Continue reading ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ಆವಿರ್ಭವಿಸಿದ ಮಾತೆ ಕಾವೇರಿ