Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಹಂಚಿಕೆಗೆ ಸಿದ್ಧತೆ ನಡೆಸಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಪೊಲೀಸರು ಶಾಕ್ ನೀಡಿದ್ದಾರೆ.
ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಕಚೇರಿಗೆ ಪೊಲೀಸರು ಬೀಗ ಜಡಿದಿದ್ದಾರೆ. ದೀಪಾವಳಿ ಸಮೀಪಿಸುತ್ತಿದ್ದಂತೆ ಪ್ರತಿ ವರ್ಷ ಮುನಿರತ್ನ ಕಚೇರಿಯಿಂದ ಜನರಿಗೆ ಪಟಾಕಿ ಹಂಚಲಾಗುತ್ತಿತ್ತು. ಪ್ರತಿವರ್ಷದಂತೆ ಈ ವರ್ಷವೂ ಶಾಸಕರ ಕಚೇರಿ ಬಳಿ ಪಟಾಕಿ ಹಂಚಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆರ್.ಆರ್.ನಗರದ ಲಕ್ಷ್ಮೀದೇವಿ ನಗರದಲ್ಲಿರುವ ಶಾಸಕ ಮುನಿರತ್ನ ಕಚೇರಿ ಬಳಿ ವೇದಿಕೆ ನಿರ್ಮಿಸಿ ಪಟಾಕಿ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಸ್ಥಳಕ್ಕೆ ದೌಡಾಯಿಸಿದ ಆರ್.ಆರ್.ನಗರ ಪೊಲೀಸರು ಪಟಾಕಿ ಹಂಚಿಕೆಗೆ ತಡೆಯೊಡ್ಡಿದ್ದಾರೆ.
ಶಾಸಕರು ಕಚೇರಿಗೆ ಬರುವ ಮುನ್ನವೇ ಶಾಸಕ ಮುನಿರತ್ನ ಕಚೇರಿಗೆ ಪೊಲೀಸರು ಬೀಗ ಜಡಿದಿದ್ದಾರೆ. ಅಲ್ಲದೇ ಕಚೇರಿಗೆ ಪೊಲೀಸರನ್ನು ನಿಯೋಜಿಸಲಾಗಿದೆ.