Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕಲಬುರಗಿ: ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್,ಅ.28ಕ್ಕೆ ಅರ್ಜಿ ಸಲ್ಲಿಸಿರುವ ಎಲ್ಲಾ ಸಂಘಟಕರ ಶಾಂತಿ ಸಭೆ ನಡೆಸಿ,ಅ.30ಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಮ್.ಜಿ.ಎಸ್.ಕಮಲ್ ಅವರು ಅರ್ಜಿ ವಿಚಾರಣೆ ನಡೆಸಿದ್ದು, ಸರಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದರು.
ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿ, ಮುಂಬರುವ ಅ.28ರಂದು ಪಥಸಂಚಲನಕ್ಕಾಗಿ ಹಾಗೂ ಪ್ರತಿಭಟನೆಗಾಗಿ ಅರ್ಜಿ ಸಲ್ಲಿಸಿರುವ ಎಲ್ಲಾ ಸಂಘಟಕರನ್ನು ಜಿಲ್ಲಾಡಳಿತದ ಕಚೇರಿಯಲ್ಲಿ ಶಾಂತಿ ಸಭೆಗೆ ಕರೆದು ಸಭೆ ನಡೆಸುವ ಮೂಲಕ,ಅ.30ರಂದು ಮಧ್ಯಾಹ್ನ 2:30ಕ್ಕೆ ಸಂಪೂರ್ಣ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.