Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಬಳ್ಳಾರಿ:ಕಿಡ್ನಾಪ್ ಮಾಡಿ ಬೇಡಿಕೆ ಇಟ್ಟಷ್ಟು ಹಣ ಕೊಟ್ಟಿಲ್ಲವೆಂದು ಕಿಡ್ನಾಪರ್ಸ್ ಚಿನ್ನದಂಗಡಿ ವರ್ತಕನ ಹತ್ಯೆ ಮಾಡಿರುವಂತಹ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಆತ ಚಿನ್ನದ ವ್ಯಾಪಾರಿ. ಎಂದಿನಂತೆ ಬೆಳಿಗ್ಗೆ ಸಹ ವಾಕಿಂಗ್ಗೆ ಹೋಗಿದ್ದರು. ಇದೇ ಸಮಯದಲ್ಲಿ ಮೂವರು ಮುಸುಕುದಾರಿಗಳು ವ್ಯಾಪಾರಿಯನ್ನು ಅಪಹರಣ ಮಾಡಿದ್ದಾರೆ. ಅಷ್ಟೇ ಅಲ್ಲದೆ ಐದು ಕೋಟಿ ರೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಹಣ ಕೊಡಲಿಲ್ಲ ಅಂದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದರು.
ಸದ್ಯ ಹೀರೆಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಮಂಜುನಾಥ ಶೆಜವಾಡಕರ್ (57) ಕೊಲೆಯಾದ ಚಿನ್ನದಂಗಡಿ ವರ್ತಕ. ಮಲ್ಲಿಕಾರ್ಜುನ ಉಜ್ಜಮ್ಮನವರ (27) ಯೋಗೇಶ ಅಂಗಡಿ (25) ಬಂಧಿತರು. ಆರೋಪಿಗಳಿಗೆ ಹೀಗೆ ಮಾಡಲು ಪ್ರೇರಣೆಯಾದುದು ಯೂಟ್ಯೂಬ್ ಎಂಬುದನ್ನು ಸ್ವತಃ ಒಪ್ಪಿಕೊಂಡಿದ್ದಾರೆ. ಇದರ ಜೊತೆಯಲ್ಲಿ ಮೊಬೈಲ್ ಲೊಕೇಶನ್ ಸಿಗದ ರೀತಿಯಲ್ಲಿ ಸಂಪರ್ಕ ಸಾಧಿಸಿ ಚಾಲಕಿತನ ಮೆರೆದಿದ್ದಿ, ಹಣಕ್ಕಾಗಿಯೇ ಈ ಕಿಡ್ನಾಪ್ ಮಾಡಿರುವುದಾಗಿ ಕೂಡ ಒಪ್ಪಿಕೊಂಡಿದ್ದಾರೆ.