Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಗೌಡರ ಕೊಲೆ ಪ್ರಕರಣದ ಸಾಕ್ಷಿ ನಾಶ ಆರೋಪದ ಜೈಲು ಪಾಲಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಇದೀಗ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ.
ಈ ಹಿಂದೆ ಸಿಬಿಐನಿಂದ ಬಂಧಿತರಾಗಿ ಸೆರೆವಾಸ ಅನುಭವಿಸಿದ್ದ ವಿನಯ್ ಕುಲಕರ್ಣಿ, ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಧಾರವಾಡಕ್ಕೆ ಅವರಿಗೆ ಎಂಟ್ರಿ ಇರಲಿಲ್ಲ. ಆದರೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಬಳಿಕ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಆದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪದ ಮೇಲೆ ನ್ಯಾಯಾಲಯ ಇವರ ಜಾಮೀನು ರದ್ದು ಮಾಡಿದ್ದರಿಂದ ಮರಳಿ ಅವರು ಪರಪ್ಪನ ಅಗ್ರಹಾರ ಸೇರಬೇಕಾಗಿ ಬಂತು. ಸಿಬಿಐ ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ. ಇದೀಗ ಸಿಬಿಐ ಸಲ್ಲಿಸಿದ್ದ ಅರ್ಜಿಯಲ್ಲಿನ ವಿಚಾರವನ್ನ ಕೋರ್ಟ್ ಎತ್ತಿ ಹಿಡಿದಿದೆ.
ಧಾರಾವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಸದ್ಯ ಸೆರೆಮನೆ ವಾಸದಲ್ಲಿದ್ದಾರೆ. 2016 ಜೂನ್ 15ರಂದು ಯೋಗೇಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣ ಕರ್ನಾಟಕದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿತ್ತು. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ತನಿಖೆ ಆರಂಭಿಸಿದ ಸಿಬಿಐ, ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪಾತ್ರವಿರುವ ಅನುಮಾನದ ಹಿನ್ನಲೆಯಲ್ಲಿ ಸಿಬಿಐ ಅರೆಸ್ಟ್ ಮಾಡಿತ್ತು.
ಜೈಲು ಸೇರಿದ ವಿನಯ್ ಕುಲಕರ್ಣಿ ಜಾಮೀನು ಪ್ರಯತ್ನಗಳು ನಡೆದಿತ್ತು. ಆದರೆ ಬಾರಿ ಹಿನ್ನಡೆಯಾಗಿತ್ತು. ಕೊನೆಗೆ ಸುಪ್ರೀಂ ಕೋರ್ಟ್ನಿಂದ ವಿನಯ್ ಕುಲಕರ್ಣಿ ಜಾಮೀನು ಪಡೆದು ಹೊರಬಂದಿದ್ದರು. ಆದರೆ ಈ ವೇಳೆ ಸಿಬಿಐ ಅಧಿಕಾರಿಗಳು ಆರೋಪಿ ಪ್ರಭಾವಿಯಾಗಿರುವ ಕಾರಣ ಸಾಕ್ಷ್ಯಿ ನಾಶದ ಆತಂಕ ವ್ಯಕ್ತಪಡಿಸಿತ್ತು. ಹೀಗಾಗಿ ಜಾಮೀನು ನಿರಾಕರಿಸುವಂತೆ ಸೂಚಿಸಿತ್ತು. ಆದರೆ ಜಾಮೀನು ಮಂಜೂರು ಮಾಡಲಾಗಿತ್ತು. ಇತ್ತ ಸಾಕ್ಷಿ ನಾಶದ ಕಾರಣ ಗಂಭೀರ ಆರೋಪವನ್ನು ಸಿಬಿಐ ವಿನಯ್ ಕುಲಕರ್ಣಿ ಮೇಲೆ ಹೊರಿಸಿತ್ತು. ಆಧರೆ ವಿನಯ್ ಕುಲಕರ್ಣಿ ಹೈಕೋರ್ಟ್ ಮೂಲಕ ಸಾಕ್ಷಿ ನಾಶ ಪ್ರಕರಣವನ್ನು ವಜಾಗೊಳಿಸುವಲ್ಲಿ ವಿನಯ್ ಕುಲಕರ್ಣಿ ಯಶಸ್ವಿಯಾಗಿದ್ದರು.
ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಜಾಮೀನು ರದ್ದು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ಜೂನ್ ತಿಂಗಳಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡಿತ್ತು. ಜೂನ್ 6 ರಂದು ಜಾಮೀನು ರದ್ದುಗೊಳಿಸಿದ ಕೋರ್ಟ್, ಒಂದು ವಾರದಲ್ಲಿ ಜನಪ್ರತಿನಿದಿಗಳ ವಿಶೇಷ ನ್ಯಾಯಾಲದ ಎದರು ಶರಣವಾಗುವಂತೆ ಸೂಚಿಸಿತ್ತು. ಇದರಂತೆ ಜೂನ್ 14 ರಂದು ವಿನಯ್ ಕುಲಕರ್ಣಿ ಶರಣಾಗಿದ್ದರು. ಬಳಿಕ ಸಿಬಿಐ ವಿನಯ್ ಕುಲಕರ್ಣಿ ವಶಕ್ಕೆ ಪಡೆದು ನ್ಯಾಯಾಲಯದ ಎದರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.