Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರೋಹ್ಟಕ್(ಹರ್ಯಾಣ): ವಿವಿ ಕಾರ್ಯಕ್ರಮಕ್ಕೆ ರಾಜ್ಯಪಾಲರು ಬರುವ ದಿನವೇ ನಡೆದಿದ್ದ ಅವಮಾನಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.
ವಿವಿಯ ಮಹಿಳಾ ಸ್ವಚ್ಛತಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದರು ಎಂಬ ಕಾರಣಕ್ಕೆ, ಪುರುಷ ಮೇಲ್ವಿಚಾರಕ ಸ್ತ್ರೀಯರ ಬಟ್ಟೆ ಬಿಚ್ಚಿಸಿ, ಮುಟ್ಟು ಪರೀಕ್ಷೆ ನಡೆಸಿದ ಆಘಾತಕಾರಿ ಘಟನೆ ಹರ್ಯಾಣದಲ್ಲಿ ನಡೆದಿದೆ.
ಅ.26ರಂದು ರಾಜ್ಯಪಾಲ ಅಸೀಮ್ ಕುಮಾರ್ ಘೋಷ್ 3 ದಿನಗಳ ಭೇಟಿಗಾಗಿ ಮಹರ್ಷಿ ದಯಾನಂದ್ ವಿವಿಗೆ ಆಗಮಿಸಿದ್ದರು. ಅದೇ ದಿನ ಕೆಲ ಮಹಿಳಾ ಸಿಬ್ಬಂದಿ ತಡವಾಗಿ ಕೆಲಸಕ್ಕೆ ಬಂದಿದ್ದಾರೆ. ತಾವು ಮುಟ್ಟಾಗಿದ್ದ ಕಾರಣ ಕೆಲಸಕ್ಕೆ ತಡವಾಯಿತು ಎಂದು ಕಾರಣ ಕೊಟ್ಟಿದ್ದಾರೆ.
ಸ್ಯಾನಿಟರಿ ಪ್ಯಾಡ್ಗಳ ಫೋಟೋ
ಇದನ್ನು ಒಪ್ಪದ ವಿಚಾರಕ, ಬೇರೆ ಮಹಿಳೆಯರಿಂದ ಹೆಂಗಸರ ವಸ್ತ್ರ ತೆಗೆಸಿ, ಅವರು ನಿಜವಾಗಿಯೂ ಮುಟ್ಟಾಗಿದ್ದಾರೆಯೇ ಎಂದು ಖದ್ದು ಪರೀಕ್ಷೆ ನಡೆಸಿದ್ದಾನೆ. ಜತೆಗೆ ಸ್ಯಾನಿಟರಿ ಪ್ಯಾಡ್ಗಳ ಫೋಟೋ ತೆಗೆದುಕೊಂಡಿದ್ದಾನೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ಘಟನೆಯಿಂದ ತೀವ್ರ ಅವಮಾನಿತರಾದ ಸಂತ್ರಸ್ತರು ಮೇಲ್ವಿಚಾರಕನ ವಿರುದ್ಧ ವಿವಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಮೇಲ್ವಿಚಾರಕನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
Nirmala seetharaman ಸಚಿವೆ ನಿರ್ಮಲಾ ಸೀತಾರಾಮನ್ ವಿಮಾನ ತುರ್ತು ಭೂಸ್ಪರ್ಶ
CBSE exam time table 9, 12ನೇ ತರಗತಿ ಬೋರ್ಡ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದ ಸಿಬಿಎಸ್ಇ
ಐರನ್ ಬಾಕ್ಸ್ ಅವಶ್ಯಕತೆ ಇಲ್ಲ, ಈ ಟ್ರಿಕ್ಸ್ ಬಳಸಿದರೆ ಸಾಕು ಬಟ್ಟೆಯ ಸುಕ್ಕುಗಳು ಮಾಯ
ಕಾಲೇಜ್ ಹುಡುಗಿಯರು ಯಾಕೆ ಅಂಕಲ್ಗಳಿಗೆ ಕ್ಲೀನ್ ಬೋಲ್ಡ್ ಆಗ್ತಾರೆ; ಇದರ ಸೀಕ್ರೆಟ್ ಏನು?
5 ದಶಕಗಳ ಸುದೀರ್ಘ ಸಿನಿ ಜೀವನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ವಿದಾಯ?