Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೊಪ್ಪಳ: ಮಹಿಳಾ ನೌಕರರಿಗೆ ರಾಜ್ಯ ಸರ್ಕಾರ ಋತುಚಕ್ರ ರಜೆ ಘೋಷಣೆ ಮಾಡಿದ ಬೆನ್ನಲ್ಲೇ ತಮಗೂ ಋತುಚಕ್ರ ರಜೆ ನೀಡಬೇಕೆಂದು ಕೊಪ್ಪಳ ಕಾಲೇಜು ವಿದ್ಯಾರ್ಥಿನಿಯರು ಅಗ್ರಹಿಸಿದ್ದಾರೆ.
ಋತುಚಕ್ರ ಸಮಯದಲ್ಲಿ ಮಹಿಳೆಯರು ವಿವಿಧ ರೀತಿಯ ಸಮಸ್ಯೆ ಅನುಭವಿಸ್ತಾರೆ. ಈ ಅವಧಿಯಲ್ಲಿ ಅವರಿಗೆ ಮಾನಸಿಕ ಹಾಗೂ ದೈಹಿಕವಾಗಿಯೂ ತೊಂದರೆಯಾಗ್ತಿದೆ. ಇದೇ ಕಾರಣಕ್ಕೆ ರಾಜ್ಯ ಸರ್ಕಾರ ಕಳೆದ ವಾರ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ 1 ದಿನ ಋತುಚಕ್ರ ರಜೆ ಘೋಷಣೆ ಮಾಡಿದೆ. ಇದನ್ನು ಉದ್ಯೋಗಸ್ಥ ಮಹಿಳೆಯರು ಸ್ವಾಗತಿಸಿದ್ದಾರೆ. ಈಗ ಕಾಲೇಜು ವಿದ್ಯಾರ್ಥಿನಿಯರೂ ಮುಟ್ಟಿನ ರಜೆಗೆ ಬೇಡಿಕೆ ಇಟ್ಟಿದ್ದಾರೆ.
ಪ್ರಾಥಮಿಕ ಶಾಲಾ ಹಂತದಿಂದ ಕಾಲೇಜು ಮುಗಿಯುವವರೆಗೂ ವಿದ್ಯಾರ್ಥಿನಿಯರು ಋತುಚಕ್ರದ ಸಮಯದಲ್ಲಿ ಸಾಕಷ್ಟು ಮುಜುಗರ, ತೊಂದರೆ ಅನುಭವಿಸುತ್ತಿದ್ದಾರೆ.
ಶಾಲಾ-ಕಾಲೇಜಲ್ಲಿ ಮುಟ್ಟು ಆದಾಗ ಸರಿಯಾದ ಶೌಚಾಲಯ, ಸ್ಯಾನಿಟರಿ ಪ್ಯಾಡ್ ಬದಲಾವಣೆ, ಪ್ಯಾಡ್ ಸಿಗದೆ ತೊಂದರೆಯಾಗ್ತಿದೆ. ಹೀಗಾಗಿ ನಮಗೂ ಮುಟ್ಟಿನ ರಜೆ ನೀಡಬೇಕೆಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ.
ಪ್ಯಾಡ್ ವುಮೆನ್ ಎಂದು ಖ್ಯಾತಿ ಪಡೆದಿರುವ ಕೊಪ್ಪಳದ ಭಾರತಿ ಗುಡ್ಲಾನೂರು ಮುಟ್ಟಿನ ಸಂದರ್ಭದ ಸಮಸ್ಯೆ ಕುರಿತು ಅಧ್ಯಯನ ಮಾಡಿದ್ದಾರೆ. ಅವರ ಪ್ರಕಾರ 2 ವರ್ಷದಲ್ಲಿ 2 ಸಾವಿರ ವಿದ್ಯಾರ್ಥಿನಿಯರನ್ನು ಕೇಳಿದಾಗ ಶೇಕಡಾ 30ರಷ್ಟು ವಿದ್ಯಾರ್ಥಿನಿಯರು ಹೊಟ್ಟೆನೋವು, ಶೇಕಡಾ 25ರಷ್ಟು ವಿದ್ಯಾರ್ಥಿನಿಯರಲ್ಲಿ ಬಿಳಿ ಮುಟ್ಟು. 3-4 ರಷ್ಟು ವಿದ್ಯಾರ್ಥಿನಿಯರಿಗೆ ಸರಿಯಾಗಿ ಮುಟ್ಟು ಆಗದೆ ಇರುವುದು ಕಂಡುಬಂದಿದೆ. ಹೀಗಾಗಿ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ತೆಲಂಗಾಣ ಸಂಪುಟದಲ್ಲಿ ಸಚಿವರಾಗಿ ಮಾಜಿ ಕ್ರಿಕೆಟ್ ನಾಯಕ ಮೊಹಮ್ಮದ್ ಅಜರುದ್ದೀನ್ ಪ್ರಮಾಣವಚನ ಸ್ವೀಕಾರ