Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಬೆಳಗಾವಿ: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಇಎಸ್ ಪುಂಡರು ಪುಂಡಾಟಿಕೆ ಮುಂದುವರೆಸಿದ್ದಾರೆ.
ಎಂಇಎಸ್ ಕರಾಳದಿನ ಆಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅವನುಮತಿ ನೀಡಿಲ್ಲ. ಕರಾಳದಿನ ಆಚರಣೆಗೆ ನಿಷೇಧವಿದ್ದರೂ ಪುಂಡಾಟ ಮೆರೆದಿರುವ ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ವೃತ್ತದಿಂದ ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ, ಮೆರವಣಿಗೆ ನಡೆಸಿದ್ದಾರೆ.
ಈ ವೇಳೆ ಬೆಳಗಾವಿ ನಮ್ಮ ಹಕ್ಕು, ಯಾರಪ್ಪನ ಆಸ್ತಿಯಲ್ಲ. ಯಾರು ಕೊಡಲ್ಲ ಅಂತಾರೆ? ತೆಗೆದುಕೊಳ್ಳದೆ ಬಿಡುವುದಿಲ್ಲ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಎಂಇಎಸ್ ಕಾರ್ಯಕರ್ತರು ಕನ್ನಡ ಸರ್ಕಾರಕ್ಕೆ ಧಿಕ್ಕಾರ. ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗುವ ಮೂಲಕ ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸೇರಿದಂತೆ ಹಲವು ಪ್ರದೇಶಗಳನ್ನು ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ.