Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಸಾಮಾನ್ಯ ದಿನದಲ್ಲಿ ಕೌಂಟರ್ಗೆ ತೆರಳಿ ಟಿಕೆಟ್ ಖರೀದಿಸಲು ಸಾಹಸ ಮಾಡಬೇಕು. ಇನ್ನು ಹಬ್ಬ,ರಜಾ ದಿನಗಳು ಅಂದರೆ ಕೇಳವುದೇ ಬೇಡ. ಟಿಕೆಟ್ ಖರೀದಿಗೆ ಕ್ಯೂ ನಿಲ್ಲಬೇಕು, ನೂಕು ನುಗ್ಗಲಿನ ಜೊತೆಗೆ ಹಲವು ಗಂಟೆಗಳ ಕಾಲ ಕ್ಯೂ ನಿಂತು ಟಿಕೆಟ್ ಖರೀದಿಸುವ ಅನಿವಾರ್ಯತೆ ಇತ್ತು.ಆದರೆ ಇದೀಗ ನೈಋತ್ಯ ರೈಲ್ವೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ (KSR) ನಿಲ್ದಾಣದಲ್ಲಿ Mobile unreserved ticketing system (MUTS) ಸಹಾಯಕ್ ಪರಿಚಯ ಮಾಡಿದೆ. ಇದರಿಂದ, ಇನ್ಮುಂದೆ ಕೆಎಸ್ಆರ್ ರೈಲ್ವೆ ನಿಲ್ದಾಣ ಪ್ರವೇಶಿಸುತ್ತಿದ್ದಂತೆಯೇ ಪ್ರಯಾಣಿಕರು ಇರುವ ಸ್ಥಳಕ್ಕೆ ಬಂದು ಟಿಕೆಟ್ ಮಷಿನ್ಗಳ ಮೂಲಕ ರೈಲ್ವೆ ಸಿಬ್ಬಂದಿ ಟಿಕೆಟ್ ನೀಡಲಿದ್ದಾರೆ.ಇಲ್ಲಿ ಪ್ರಯಾಣಿಕರು ಕ್ಯೂ ನಿಲ್ಲಬೇಕಿಲ್ಲ. ಪ್ರಯಾಣಿಕರು ಎಲ್ಲಿ ನಿಂತಿದ್ದಾರೋ ಅಲ್ಲೆ ಟಿಕೆಟ್ ಪಡೆಯಲು ಸಾಧ್ಯವಿದೆ.
ಈ ವ್ಯವಸ್ಥೆಯನ್ನು ದೇಶದಲ್ಲಿ ಐದು ರೈಲ್ವೆ ಸ್ಟೇಷನ್ ಗಳಲ್ಲಿ ಜಾರಿ ಮಾಡಲು ರೈಲ್ವೆ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಪ್ರಾಯೋಗಿಕವಾಗಿ ಮೊದಲಿಗೆ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಪರಿಚಯ ಮಾಡಲಾಗಿದೆ. ಜನರ ದಟ್ಟಣೆ ನಿಯಂತ್ರಣಕ್ಕಾಗಿ ಈ MUTS ಸಹಾಯಕ್ ಆರಂಭಿಸಲಾಗಿದೆ.
MUTS ಸಹಾಯಕ್ ಮೂಲಕ ಟಿಕೆಟ್ ಖರೀದಿ ಮಾಡಿದರೆ ಶೇ 3 ರಷ್ಟು ರಿಯಾಯಿತಿ ಕೂಡ ಸಿಗಲಿದೆ. ಪ್ರತಿದಿನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಇದ್ದಲ್ಲಿಗೆ ಹೋಗಿ ಸಹಾಯಕ್ಗಳು ಟಿಕೆಟ್ ಕೊಡಲಿವೆ. ಇದು ಯಶಸ್ವಿಯಾದರೆ ರಾಜ್ಯದ ಎಲ್ಲಾ ರೈಲ್ವೆ ನಿಲ್ದಾಣಗಳಿಗೆ ವಿಸ್ತರಿಸುವ ಗುರಿಯನ್ನು ನೈಋತ್ಯ ರೈಲ್ವೆ ಹಾಕಿಕೊಂಡಿದೆ.