Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಿದ್ದು, ಇಂದು (ನ.07) ಮಧ್ಯಾಹ್ನ 3 ಗಂಟೆಯಿಂದ ಮೆರವಣಿಗೆಯು ಬೊಮ್ಮನಹಳ್ಳಿ ಜಂಕ್ಷನ್ನಲ್ಲಿ ಸಾಗಲಿರುವ ಕಾರಣ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಬೆಂಗಳೂರು ಸಂಚಾರ ಪೊಲೀಸರು ಸೂಚಿಸಿದ್ದಾರೆ.
ಪರ್ಯಾಯ ಮಾರ್ಗ
ವಿಲ್ಸನ್ಗಾರ್ಡನ್, ಆಡುಗೋಡಿ, ಕಡೆಯಿಂದ ಬರುವ ವಾಹನಗಳು ಡೈರಿ ಸರ್ಕಲ್ ಮೂಲಕ ಬನ್ನೇರುಘಟ್ಟ ರಸ್ತೆಗೆ ಸಾಗಿ ಅಲ್ಲಿಂದ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ಸಂಚರಿಸಬಹುದು
ಬನಶಂಕರಿಯಿಂದ ಕಡೆಯಿಂದ ಡಬಲ್ ಡೆಕ್ಕರ್ ಮೂಲಕ ಬರುವ ವಾಹನಗಳು ಜಯದೇವ ಜಂಕ್ಷನ್ನಲ್ಲಿ ಬಲ ತಿರುವುದು ಕಡೆದು ಬನ್ನೇರುಘಟ್ಟ ರಸ್ತೆ ಮೂಲಕ ಸಾಗಿ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ಸಂಚಾರ
ಹೊರವರ್ತುಲ ರಸ್ತೆ ಮಾರತಹಳ್ಳಿ ಕಡೆಯಿಂದ ಬರುವ ವಾಹನಗಳು 27ನೇ ಮುಖ್ಯರಸ್ತೆ ಎಡ ತಿರುವು ಪಡೆದು ವೇಮನ ಜಂಕ್ಷನ್ ಮೂಲಕ ಸೋಮಸುಂದರ್ಪಾಳ್ಯ ಮಾರ್ಗವಾಗಿ ಕೂಡ್ಲುಗೆ ತೆರಳಿ ಹೊಸೂರು ಮುಖ್ಯ ರಸ್ತೆ
ಹೊಸೂರು ಕಡೆಯಿಂದ ಬೆಂಗಳೂರು ನಗರಕ್ಕೆ ಬರುವ ವಾಹನಗಳು ಎಲೆಕ್ಟ್ರಾನಿಕ್ಸಿಟಿ ಎಲಿವೇಟೆಡ್ ಪ್ರೈಓವರ್ ಮೂಲಕ ಸಂಚರಿಸಬಹುದು.