Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ದಾವಣಗೆರೆ,: ಅಮವಾಸ್ಯೆ ಹಾಗೂ ಹುಣ್ಣಿಮೆ ಬಂದರೆ ಯಾರೂ ಕೂಡ ಮನೆಯಿಂದ ಹೊರ ಬರುತ್ತಿಲ್ಲ. ಹೌದು, ದಾವಣಗೆರೆ ಜಿಲ್ಲೆಯ ಹೂವಿನಮಡು ಗ್ರಾಮದಲ್ಲಿ ಕಳೆದೊಂದು ವರ್ಷದಿಂದ ಹತ್ತಕ್ಕೂ ಹೆಚ್ಚು ಮನೆಗಳ ಮುಂದೆ ಮಂತ್ರಿಸಿದ ನಿಂಬೆಹಣ್ಣು ಇಡಲಾಗಿದೆ. ಕಾರು, ಬೈಕ್ ಹಾಗೂ ಟ್ರ್ಯಾಕ್ಟರ್ಗಳ ಕೆಳಗೆ ವಾಮಾಚಾರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಅಮಾವಾಸ್ಯೆ- ಹುಣ್ಣಿಮೆಗೆ ಕೆಲವರ ಮನೆಯಲ್ಲಿ ಜನ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಕೌಟುಂಬಿಕ ಕಲಹ ಹೆಚ್ಚಾಗುತ್ತಿವೆ ಎನ್ನಲಾಗಿದೆ.
ಬುದವಾರ ಹುಣ್ಣಿಮೆ ಇತ್ತು. ಹೀಗಾಗಿ ವಾಮಾಚಾರ ಮಾಡುವವರನ್ನು ಪತ್ತೆ ಹಚ್ಚಲು ಕೆಲ ಯವಕರು ರಾತ್ರಿಯಿಡೀ ಕಾದಿದ್ದರು. ಈ ವೇಳೆ ಗ್ರಾಮದ ರಾಜಪ್ಪ ಎಂಬಾತ ಈ ಕೃತ್ಯ ಎಸೆಗುತ್ತಿರುವುದನ್ನು ನೋಡಿದ್ದಾಗಿ ಜನರು ಆರೋಪಿಸಿದ್ದಾರೆ. ಕೆಲವರ ಜತೆ ಜಮೀನು ವಿವಾದವಿದ್ದು, ಇದರಿಂದಾಗಿ ರಾಜಪ್ಪ ಹೀಗೆ ಮಾಡುತ್ತಿದ್ದಾನೆಂದು ಜನ ಆರೋಪಿಸಿದ್ದಾರೆ. ಈ ಬಗ್ಗೆ ಸಾಕ್ಷ್ಯಾಧಾರಗಳೊಂದಿಗೆ ಪೊಲೀಸರಿಗೂ ದೂರು ನೀಡಿದ್ದಾರೆ.
‘ಮಾಟ-ಮಂತ್ರದಿಂದ ಕಾಪಾಡಪ್ಪ ಭಗವಂತಾ’ ಎಂದು ಜನ ಸಿಕ್ಕ ಸಿಕ್ಕ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಪೊಲೀಸರು ಆರೋಪಿಯನ್ನ ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕಿದೆ.
https://www.newsics.com/2025/11/07/sugarcane-growers-protest-turns-violent-farmers-pelt-stones-in-response-to-police-lathicharge/