Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೋಲಾರ: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ನಡೆಯಲಿದೆ.
ಮರು ಮತ ಎಣಿಕೆಗಾಗಿ ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. 2023 ರ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೈ.ನಂಜೇಗೌಡ 248 ಮತಗಳಿಂದ ಗೆದ್ದಿದ್ದರು. ಈಗ ಹೈಕೋರ್ಟ್, ಸುಪ್ರೀಂಕೋರ್ಟ್ ಮರು ಮತ ಎಣಿಕೆಗೆ ಆದೇಶ ನೀಡಿವೆ. ಹಾಲಿ ಶಾಸಕ ಕೆ.ವೈ.ನಂಜೇಗೌಡಗೆ ಢವ ಢವ ಶುರುವಾಗಿದೆ.
ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಮಂಜುನಾಥಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಮರು ಮತ ಎಣಿಕೆಗೆ ಆದೇಶಿಸಿ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದು, ಬಳಿಕ ನಂಜೇಗೌಡರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಸುಪ್ರೀಂಕೋರ್ಟ್ ಶಾಸಕ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ನೀಡಿ ಮರುಮತ ಎಣಿಕೆಗೆ ಆದೇಶಿಸಿತ್ತು. ಅಂತೆಯೇ ಇಂದು ಮರುಮತ ಎಣಿಕೆ ನಡೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.
https://www.newsics.com/2025/11/11/delhi-car-blast-case-case-registered-under-uapa/