newsics.com
ವಿಜಯಪುರ: ಒಂದೇ ಕುಟುಂಬದ ಮೂವರು ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ನಾಪತ್ತೆಯಾಗಿರುವ ಘಟನೆ ವಿಜಯಪುರದ ಶಿರೋಳದಲ್ಲಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಸಮ್ಮ ಕೊಣ್ಣೂರು(21), ಸಂತೋಷ(16), ರವಿ ಕೊಣ್ಣೂರು(15) ಎನ್ನುವರು ಕಾಲು ಜಾರಿ ಶಿರೋಳ ಬಳಿ ಕೆಬಿಜೆಎನ್ಎಲ್ ಎಡದಂಡೆ ಕಾಲುವೆಗೆ ಬಿದ್ದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಗ್ನಿಶಾಮಕ ದಳ ಸಿಬ್ಬಂದಿಗ ದೌಡಾಯಿಸಿ ನಾಪತ್ತೆಯಾದವರ ಪತ್ತೆಗೆ ಶೋಧ ನಡೆಸಿದ್ದಾರೆ.