Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kashmiri doctor detained ದೆಹಲಿ ಕಾರು ಸ್ಫೋಟ: ಮತ್ತೋರ್ವ ಕಾಶ್ಮೀರಿ ವೈದ್ಯ ವಶಕ್ಕೆ, ಸ್ಫೋಟದ ತೀವ್ರತೆ ಸಾರುವ ಮತ್ತೊಂದು ವಿಡಿಯೋ ಬಿಡುಗಡೆ
ದೇಶಪ್ರಮುಖ

Kashmiri doctor detained ದೆಹಲಿ ಕಾರು ಸ್ಫೋಟ: ಮತ್ತೋರ್ವ ಕಾಶ್ಮೀರಿ ವೈದ್ಯ ವಶಕ್ಕೆ, ಸ್ಫೋಟದ ತೀವ್ರತೆ ಸಾರುವ ಮತ್ತೊಂದು ವಿಡಿಯೋ ಬಿಡುಗಡೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಶ್ಮೀರ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟ ಪ್ರಕರಣ ಸಂಬಂಧ ಕಾಶ್ಮೀರದ ಮತ್ತೊಬ್ಬ ವೈದ್ಯನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಅಲ್ಲದೆ, ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ. ಸ್ಫೋಟದಲ್ಲಿ ಈವರೆಗೆ 12 ಮಂದಿ ಪ್ರಾಣ ಕಳೆದುಕೊಂಡಿದ್ದಾಗಿ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಪೈಕಿ ಎಂಟು ಜನರನ್ನು ಗುರುತಿಸಲಾಗಿದೆ

.
ದಕ್ಷಿಣ ಕಾಶ್ಮೀರದ ಕುಲ್ಗಮ್ ಜಿಲ್ಲೆಯ ಡಾ.ತಜಮುಲ್ ಅಹ್ಮದ್ ಮಲಿಕ್ ಎಂಬಾತನೇ ವಶಕ್ಕೆ ಪಡೆಯಲಾದ ಆರೋಪಿ. ಈತ ಕಣಿವೆನಾಡಿನ ತೃತೀಯ ದರ್ಜೆ ಸರ್ಕಾರಿ ಆಸ್ಪತ್ರೆಯಾದ ಶ್ರೀ ಮಹಾರಾಜ ಹರಿ ಸಿಂಗ್ ಆಸ್ಪತ್ರೆಯಲ್ಲಿ (SMHS) ಕೆಲಸ ಮಾಡುತ್ತಿದ್ದ. ಪ್ರಕರಣದಲ್ಲಿ ಯಾವ ಕಾರಣ, ಹಿನ್ನೆಲೆಯ ಆಧಾರದ ಮೇಲೆ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಜೈಶ್-ಎ-ಮೊಹಮ್ಮದ್ ಜತೆ ಸಂಬಂಧ ಹೊಂದಿರುವ ‘ವೈಟ್ ಕಾಲರ್’ ಟ್ರಾನ್ಸ್-ಸ್ಟೇಟ್ ಭಯೋತ್ಪಾದನಾ ಘಟಕದಲ್ಲಿ ಹೆಸರು ಕೇಳಿಬಂದಿದೆ ಎನ್ನಲಾದ ಕಾಶ್ಮೀರದ ಐದನೇ ವೈದ್ಯ ಈತನಾಗಿದ್ದಾನೆ

.
ಈ ಸ್ಫೋಟದಲ್ಲಿ, ಜಮ್ಮು ಮತ್ತು ಕಾಶ್ಮೀರದ ಹೊರತಾಗಿ, ಹರಿಯಾಣದ ಫರಿದಾಬಾದ್ ಮತ್ತು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯರು ಸೇರಿದಂತೆ ಡಾ. ಉಮರ್ ನಬಿ ಎಂಬಾತ ಕೂಡ ಸಾವನ್ನಪ್ಪಿರುವ ಶಂಕೆ ಇದೆ.

ಕಳೆದ ತಿಂಗಳಿಂದಲೂ ಸಹ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈತನಿಗಾಗಿ ಹುಡುಕಾಡುತ್ತಿದ್ದರು
ಇದಕ್ಕೂ ಮುನ್ನ, ಫರಿದಾಬಾದ್‌ನ ಅಲ್ ಫಲಾಹ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಪುಲ್ವಾಮಾದ ಡಾ.ಮುಜಮ್ಮಿಲ್ ಶಕೀಲ್ ಮತ್ತು ಸಹರಾನ್‌ಪುರದ ಫೇಮಸ್ ಮೆಡಿಕೇರ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅನಂತ್‌ನಾಗ್‌ನ ಡಾ.ಅದೀಲ್ ಅಹ್ಮದ್ ರಾಥರ್ ಅವರನ್ನು ಈ ತಿಂಗಳ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದರು.

ಕೆಂಪು ಕೋಟೆ ಬಳಿ ಸಂಭವಿಸಿದ ಪ್ರಬಲ ಸ್ಫೋಟದ ಕ್ಷಣವನ್ನು ಸೆರೆಹಿಡಿದ ಸಿಸಿಟಿವಿ ದೃಶ್ಯಾವಳಿ ಬುಧವಾರ ಬೆಳಕಿಗೆ ಬಂದಿದೆ. ಕೆಂಪು ಕೋಟೆ ಕ್ರಾಸಿಂಗ್‌ನಲ್ಲಿ ಅಳವಡಿಸಲಾದ ಕಣ್ಗಾವಲು ಕ್ಯಾಮರಾದಲ್ಲಿ ದಾಖಲಾಗಿರುವ ಈ ದೃಶ್ಯವು, ಜನನಿಬಿಡ, ವಾಹನಗಳು ಸಂಚರಿಸುತ್ತಿರುವಾಗಲೇ ಹಠಾತ್ ಬೆಂಕಿಯ ಜ್ವಾಲೆ ಆವರಿಸಿರುವುದನ್ನು ಕಾಣಬಹುದು.

ಸೋಮವಾರ ಸಂಜೆ 6.50ರ ಸುಮಾರಿಗೆ ಸಂಭವಿಸಿದ ಈ ಸ್ಫೋಟದಲ್ಲಿ ಕೆಂಪು ಬಲೂನ್ ಸಿಡಿದಂತೆ ಗೋಚರಿಸುತ್ತಿದೆ. ಬಳಿಕ ಜನರು ರಕ್ಷಣೆಗಾಗಿ ಓಡುತ್ತಿದ್ದು, ಭಯಭೀತ ವಾತಾವರಣ ಸೃಷ್ಟಿಯಾಗಿರುವುದು ಸೆರೆಯಾಗಿದೆ.
ಮೂವರು ವೈದ್ಯರು ಸೇರಿದಂತೆ 8 ಜನ ಶಂಕಿತರನ್ನು ಬಂಧಿಸಿ, 2,900 ಕೆಜಿ ಸ್ಫೋಟಕಗಳನ್ನು ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಭಯಾನಕ ಘಟನೆ ಸಂಭವಿಸಿತ್ತು.

ಜ.26ರಂದು ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು: ಕಾರು ಸ್ಫೋಟ ತನಿಖೆ ವೇಳೆ ಬಹಿರಂಗ

Actor Gaddappa is no more ಚಿತ್ರನಟ ಗಡ್ಡಪ್ಪ ಇನ್ನಿಲ್ಲ

TAGGED:Delhi car blast: Another Kashmiri doctor detained
Share This Article
Facebook Twitter Copy Link Print
Previous Article Actor Gaddappa is no more ಚಿತ್ರನಟ ಗಡ್ಡಪ್ಪ ಇನ್ನಿಲ್ಲ
Next Article ಸರ್ಕಾರಿ ಮಹಿಳಾ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ, ಸ್ಥಿತಿ ಗಂಭೀರ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?