Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮೈಸೂರು: ಪತ್ನಿಯ ಅಕ್ರಮ ಸಂಬಂಧ ವಿರೋಧಿಸಿದ ಪತಿಯನ್ನೇ ಪತ್ನಿ ದೊಣ್ಣೆಯಿಂದ ಹೊಡೆದು, ಮರ್ಮಾಂಗ ಹಿಸುಕಿ ಕೊಲೆ ಮಾಡಿದ ಘಟನೆ ನಂಜನಗೂಡಿನ ಇಂದಿರಾ ಗ್ರಾಮದಲ್ಲಿ ನಡೆದಿದೆ.
ಪ್ರಿಯಕರನ ಹಿಂಸೆಗೆ ಎರಡು ಮಕ್ಕಳ ತಾಯಿ ಗಂಡನನ್ನು ಕೊಂದು ಕೊಲೆ ಎಂದು ನಂಬಿಸಲು ಹೋಗಿ ಸಿಕ್ಕಿ ಬಿದ್ದಿದ್ದಾಳೆ. ಗ್ರಾಮಸ್ಥರೇ ಆಕೆಯನ್ನು ಪೊಲೀಸರಿಗೆ ಒಪ್ಪಿಸಿದ್ದು, ಎರಡು ಮಕ್ಕಳೀಗ ಅನಾಥರಾಗಿದ್ದಾರೆ.
ಆತ ಊರಿಗೇ ನ್ಯಾಯ ಹೇಳುವ ಚಿಕ್ಕ ಯಜಮಾನ. ಆದರೆ ತನ್ನ ಪತ್ನಿಯನ್ನೇ ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗದೆ ಹೆಣವಾಗಿದ್ದಾನೆ.
ಪತ್ನಿಯ ಅಕ್ರಮ ಸಂಬಂಧ ಪ್ರಶ್ನಿಸಿ ಕೊಲೆಯಾಗಿದ್ದಾನೆ. ಕೂಲಿ ಮಾಡಿಬಂದು ರಾತ್ರಿ ಊಟ ಮಾಡಿದವನು ಹೆಂಡತಿಯ ಒಂದೇ ಏಟಿಗೆ ಪ್ರಾಣ ಬಿಟ್ಟಿದ್ದಾನೆ. ಗಂಡನನ್ನಉ ಹೊಡೆದು ಕೊಂದವಳು ಆತ್ಮಹತ್ಯೆ ಎಂದು ಕಥೆ ಕಟ್ಟಲು ಹೋಗಿ ಸಿಕ್ಕಿಬಿದ್ದಿದ್ದಾಳೆ.
ಇಂದಿರಾ ಗ್ರಾಮದ ಚಿಕ್ಕ ಯಜಮಾನ ವೀರಣ್ಣ(41) ಮೃತ ದುರ್ದೈವಿ. ಆರೋಪಿ ಶಿವಮ್ಮ(35) ಇದೀಗ ಹುಲ್ಲಹಳ್ಳಿ ಪೊಲೀಸರ ಅತಿಥಿಯಾಗಿದ್ದಾಳೆ. ಪರಪುರುಷನ ಕಾಟಕ್ಕೆ ಗಂಡನನ್ನ ಕೊಲೆ ಮಾಡಿರುವುದಾಗಿ ಪತ್ನಿ ಒಪ್ಪಿಕೊಂಡಿದ್ದಾಳೆ.
13 ವರ್ಷಗಳ ಹಿಂದೆ ಇವರಿಬ್ಬರ ವಿವಾಹ ನೆರವೇರಿತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದರು. ನಾಲ್ಕು ವರ್ಷದ ಹಿಂದೆ ಹೆಚ್.ಡಿ.ಕೋಟೆಯ ಬಲರಾಮ ಎಂಬಾತನ ಜತೆ ಶಿವಮ್ಮ ಪರಿಚಯ ಆಗಿತ್ತು. ಪರಿಚಯ ಅಕ್ರಮ ಸಂಬಂಧಕ್ಕೂ ದಾರಿ ಆಗಿತ್ತು. ಈ ವಿಚಾರ ಪತಿ ವೀರಣ್ಣಗೆ ತಿಳಿದು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಈ ವಿಚಾರದಲ್ಲಿ ನ್ಯಾಯ ಪಂಚಾಯ್ತಿ ಸಹ ನಡೆದಿತ್ತು. ಹಲವು ಬಾರಿ ಆತನ ಸಂಪರ್ಕ ಬಿಡುವಂತೆ ಬುದ್ಧಿ ಹೇಳಲಾಗಿತ್ತು. ಹೀಗಿದ್ದೂ ಶಿವಮ್ಮ ಹಾಗೂ ಬಲರಾಮ್ ನಡುವೆ ಸಂಬಂಧ ಮುಂದುವರೆದಿತ್ತು.
ಮಂಗಳವಾರ ರಾತ್ರಿ ಬಲರಾಮ ಫೋನ್ ಮಾಡಿದ್ದಾನೆ. ಈ ವಿಚಾರದಲ್ಲಿ ದಂಪತಿ ನಡುವೆ ಗಲಾಟೆ ಆಗಿದೆ. ರಾತ್ರಿ ಊಟ ಮಾಡಿ ಪತಿ ಮಲಗಿದ್ದಾರೆ. ಕೆಲವೇ ಸಮಯದಲ್ಲಿ ಶಿವಮ್ಮ ಬಾಯಿ ಬಡಿದುಕೊಂಡು ಮನೆಯಿಂದ ಹೊರಬಂದಿದ್ದಾಳೆ. ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿಸಿದ್ದಾಳೆ. ಕುತ್ತಿಗೆಯಲ್ಲಿ ಸೀರೆ ಕಂಡುಬಂದಿದೆ. ಮಾಹಿತಿ ಅರಿತ ಹುಲ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಮಾಡಿದಾಗ ಬಲರಾಮನ ಜತೆ ಸಂಬಂಧ ಬಿಚ್ಚಿಟ್ಟಿದ್ದಾರೆ.
ಹುಲ್ಲಹಳ್ಳಿ ಪೊಲೀಸರು ಶಿವಮ್ಮಳನ್ನು ವಿಚಾರಣೆಗೆ ಒಳಪಡಿಸಿ ಸಂಚು ಬಯಲಿಗೆಳೆದಿದ್ದಾರೆ. ಆದರೆ ಇದಕ್ಕೆ ಕಾರಣನಾದ ಪ್ರಿಯಕರನ ಬಂಧನ ಮಾತ್ರ ಇನ್ನೂ ಆಗಿಲ್ಲ.