Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಲದೆ, ಇದೊಂದು ಉಗ್ರರ ಹೇಯ ಕೃತ್ಯವೆಂದು ಖಂಡಿಸಿದೆ.
ಬುಧವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಕೇಂದ್ರ ಭದ್ರತಾ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿಯ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ನವೆಂಬರ್ 10ರಂದು ನಡೆದ ಸ್ಪೋಟ ಉಗ್ರರ ಹೇಯ ಕೃತ್ಯವಾಗಿದೆ ಎಂದು ಹೇಳಿದರು.
ನವೆಂಬರ್ 10 ರಂದು ನಡೆದ ದೆಹಲಿ ಭಯೋತ್ಪಾದಕ ಘಟನೆಯನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟ ಇಂದು ನಿರ್ಣಯವನ್ನು ಅಂಗೀಕರಿಸಿತು ಮತ್ತು ಮೃತಪಟ್ಟವರಿಗೆ ಗೌರವ ಸಲ್ಲಿಸಿತು.
ನವೆಂಬರ್ 10 ರಂದು ಕೆಂಪು ಕೋಟೆ ಬಳಿ ಕಾರು ಸ್ಫೋಟದ ಮೂಲಕ ದೇಶ ವಿರೋಧಿ ಶಕ್ತಿಗಳು ನಡೆಸಿದ ಘೋರ ಭಯೋತ್ಪಾದಕ ಘಟನೆಯನ್ನು ದೇಶ ಕಂಡಿದೆ. ಘಟನೆಯ ತನಿಖೆಯನ್ನು ಅತ್ಯಂತ ತುರ್ತಾಗಿ ಮತ್ತು ವೃತ್ತಿಪರತೆಯಿಂದ ಮುಂದುವರಿಸಬೇಕೆಂದು ಸಚಿವ ಸಂಪುಟ ನಿರ್ದೇಶಿಸುತ್ತದೆ. ಇದರಿಂದಾಗಿ ಅಪರಾಧಿಗಳು, ಅವರ ಸಹಯೋಗಿಗಳು ಮತ್ತು ಅವರ ಪ್ರಾಯೋಜಕರನ್ನು ಗುರುತಿಸಿ ವಿಳಂಬವಿಲ್ಲದೆ ನ್ಯಾಯದ ಕಟಕಟೆಗೆ ತರಲಾಗುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ನಿರ್ಣಯವನ್ನು ಓದಿದರು.
https://twitter.com/i/status/1988620503838601217
Actress Sherlyn Chopra ಇಂಪ್ಲಾಂಟ್ ಸ್ತನ ತೆಗೆದ ನಟಿ ಶೆರ್ಲಿನ್ ಚೋಪ್ರಾ, ಏನಾಯ್ತು ಬಿಂದಾಸ್ ನಟಿಗೆ?
Illicit affair ಅಕ್ರಮ ಸಂಬಂಧ ಪ್ರಶ್ನಿಸಿದ ಪತಿಯ ಮರ್ಮಾಂಗ ಹಿಸುಕಿ ಕೊಂದ ಪತ್ನಿ, ಮಕ್ಕಳು ಅನಾಥ