Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಪ್ರತಿ ಬಾರಿ ಸಂಕ್ರಾಂತಿ ಸಮೀಪಿಸುತ್ತಿದ್ದಂತೆಯೇ ಅಯ್ಯಪ್ಪ ಸ್ವಾಮಿ ಭಕ್ತರ ಸಂಭ್ರಮ ಮುಗಿಲುಮುಟ್ಟುತ್ತದೆ. ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಗೆ ತೆರಳಿ ದೇವರ ಸಾನ್ನಿಧ್ಯದಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವ ಗಳಿಗೆಗಾಗಿ ಅವರು ಕಾಯುತ್ತಿರುತ್ತಾರೆ. ಕೇರಳ ಮಾತ್ರವಲ್ಲ, ದಕ್ಷಿಣ ಭಾರತದ ಎಲ್ಲ ರಾಜ್ಯಗಳಿಂದಲೂ ಅಯ್ಯಪ್ಪ ಸ್ವಾಮಿಗೆ ಲಕ್ಷಾಂತರ ಭಕ್ತರಿದ್ದಾರೆ.
ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ ‘ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್’ ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದು, ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ.
ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ತಮ್ಮ ದಾಖಲೆ ಹಾಗೂ ಔಷಧಗಳನ್ನು ಕೊಂಡೊಯ್ಯಬೇಕು. ಯಾತ್ರೆಯ ಸಂದರ್ಭದಲ್ಲಿ ನಿಯಮಿತ ಔಷಧಗಳನ್ನು ನಿಲ್ಲಸಬಾರದು. ಶಬರಿಮಲೆಗೆ ನಡೆಯುವಂತ ಸಂದರ್ಭದಲ್ಲಿ ಒತ್ತಡ ನಿರ್ವಹಣೆಯಾಗಿ ನಡಿಗೆಯಂತ ಲಘು ವ್ಯಾಯಾಮ ಮಾಡುವಂತೆಯೂ ಸಲಹೆ ನೀಡಿದೆ.
ಕುದಿಸಿದ ನೀರನ್ನೇ ಕುಡಿಯಬೇಕು. ಕೈತೊಳೆಯಲು, ಅಡುಗೆಗೆ, ಹಣ್ಣುಗಳನ್ನು ತೊಳೆಯಲು ಕುದಿಸಿದ ನೀರನ್ನೇ ಬಳಸಬೇಕು. ಹಳಸಿದ ಹಾಗೂ ಹೊರಗೆ ತೆರೆದಿದ್ದ ಆಹಾರಗಳನ್ನು ಸೇವಿಸಬಾರದು. ಬಯಲು ಬಹಿರ್ದೆಸೆ ನಿಷೇಧಿಸಲಾಗಿದೆ. ಶೌಚಾಲಯಗಳನ್ನೇ ಬಳಸಬೇಕು ಹಾಗೂ ನಂತರ ಶುಚಿಯಾಗಿ ಕೈತೊಳೆದುಕೊಳ್ಳಬೇಕು. ತ್ಯಾಜ್ಯಗಳನ್ನು ನಿರ್ದಿಷ್ಟ ಜಾಗದಲ್ಲೇ ಹಾಕಬೇಕು ಎಂದು ಸರ್ಕಾರ ಸೂಚಿಸಿದೆ.