Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಚಿನ್ನಯ್ಯನನ್ನು ಬಂಧಿಸಿದ ಪೊಲೀಸರು ವಿಚಾರಣೆ ಬಳಿಕ ಶಿವಮೊಗ್ಗ ಜೈಲಿನಲ್ಲಿ ಇರಿಸಿದ್ದಾರೆ.
ಚಿನ್ನಯ್ಯ ಜತೆ ಸಂಪರ್ಕದಲ್ಲಿದ್ದರು ಎನ್ನುವ ಕಾರಣಕ್ಕೆ ಮಹೇಶ್ ತಿಮರೋಡಿ ಶೆಟ್ಟಿ, ಗಿರೀಶ್ ಮಟ್ಟಣ್ಣನವರ್ , ಟಿ ಜಯಂತ್ ಸೇರಿದಂತೆ ಅನೇಕರನ್ನು ವಿಚಾರಣೆ ನಡೆಸಲಾಗಿತ್ತು. ಆದ್ರೆ ಇದೀಗ ಎಸ್ಐಟಿ ವಿರುದ್ಧವೇ ದೂರು ನೀಡಿದ್ದಾರೆ.
ಪದೇ ಪದೇ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡ್ತಿದ್ದ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ವ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಎಸ್ಐಟಿ ಅಧಿಕಾರಿಗಳು ದೈಹಿಕ ಹಲ್ಲೆ, ಪ್ರಾಣ ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ್ದಾರೆ ಎಂದು ಜಯಂತ್ ದೂರಿನ ಮೂಲಕ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.
https://www.newsics.com/2025/11/16/husband-commits-suicide-after-video-call-to-wife/