Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರ್ವಜನಿಕ ಜೀವನದಿಂದ ಯಾವಾಗಲೂ ದೂರ ಉಳಿಯುವ, ಮೈಸೂರಿನಲ್ಲಿ ಸರಳ ಜೀವನ ನಡೆಸುವ ಸಿಎಂ ಸಿದ್ದರಾಮಯ್ಯ ಪತ್ನಿಗೆ ಐಸಿಯುವಿನಲ್ಲಿ ಚಿಕಿತ್ಸೆ, ಪುತ್ರ ಯತೀಂದ್ರ ಮಾಹಿತಿ ನೀಡಿದ್ದಾರೆ.
ತಾಯಿ ಜೊತೆಗೆ ಆಸ್ಪತ್ರೆಯಲ್ಲಿರುವ ಪುತ್ರ ಯತೀಂದ್ರ ಸಿದ್ದರಾಮಯ್ಯ ತಾಯಿ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ. ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿದೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದಿದ್ದಾರೆ.
ಶ್ವಾಸಕೋಶದಲ್ಲಿ ನೀರು ತಂಬಿಕೊಂಡ ಕಾರಣ ತಾಯಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಆಸ್ಪತ್ರೆ ದಾಖಲಾದ ಬೆನ್ನಲ್ಲೇ ಹಲವು ಪರೀಕ್ಷೆ ನಡೆಸಲಾಗಿದೆ. ವೈದ್ಯರು ನಾಳೆವರೆಗೆ ಇರಲು ಹೇಳಿದ್ದಾರೆ. ಸದ್ಯ ತಾಯಿ ಆರೋಗ್ಯ ಚೇತರಿಕೆ ಕಂಡಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಪಾರ್ವತಿ ಅವರ ಪಲ್ಸ್ ರೇಟ್ ಕೂಡ ಕುಸಿತಗೊಂಡಿತ್ತು. ಹೀಗಾಗಿ ಸಿದ್ದರಾಮಯ್ಯ ಪತ್ನಿ ಅಸ್ವಸ್ಥಗೊಂಡಿದ್ದರು.
ಪ್ರಧಾನಿ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗಾಗಿ ದೆಹಲಿಗೆ ತೆರಳಿದ್ದ ಸಿಎಂ ಸಿದ್ಧರಾಮಯ್ಯ ತಡರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದ್ದಾರೆ.
https://www.newsics.com/2025/11/18/terrorists-were-planning-a-horrific-hamas-style-attack/