Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಉದ್ದದ ಚಾಕು ಹಿಡಿದು ಬಂದ ವ್ಯಕ್ತಿಯೊಬ್ಬ, ಇಬ್ಬರು ಟ್ಯಾಕ್ಸಿ ಚಾಲಕರನ್ನ ಅಟ್ಟಾಡಿಸಿಕೊಂಡು ಹೋಗಿ ದಾಳಿ ನಡೆಸಲು ಯತ್ನಿಸಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಸಮಯಕ್ಕೆ ಸರಿಯಾಗಿ ಸಿಐಎಸ್ಎಫ್ ಸಿಬ್ಬಂದಿ ಬಂದಿದ್ದು, ದೊಡ್ಡ ಅನಾಹುತ ತಪ್ಪಿದೆ.
ಈ ಘಟನೆ ನವೆಂಬರ್ 16 ರ ಮಧ್ಯರಾತ್ರಿ ಟರ್ಮಿನಲ್ 1 ರ ಪ್ರಯಾಣಿಕರ ಪ್ರವೇಶದ ಪ್ರದೇಶದಲ್ಲಿ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ದೃಶ್ಯ ಸೆರೆಯಾಗಿದೆ.
ಈ ಬಗ್ಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಅಧಿಕಾರಿ ಕೂಡ ಮಾಹಿತಿ ನೀಡಿದ್ದಾರೆ. ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಚಾಕು ಹಿಡಿದು ಚಾಲಕರ ಕಡೆಗೆ ಓಡಿಹೋದನು, ಇದು ಅಲ್ಲಿದ್ದವರಲ್ಲಿ ಭಯಭೀತತೆಯನ್ನು ಉಂಟುಮಾಡಿತು.