Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಗಂಡನನ್ನ ಬಿಟ್ಟು ಮಗಳು ತವರಿಗೆ ಬಂದಿದ್ದಕ್ಕೆ ಸಿಟ್ಟಾದ ತಾಯಿ ಮಗಳನ್ನ ಮಚ್ಚಿನಿಂದ ಕೊಚ್ಚಿದ ಘಟನೆ ಬೆಂಗಳೂರಿನ ಅಗ್ರಹಾರ ಲೇಔಟ್ ನಲ್ಲಿ ನಡೆದಿದೆ.
ಪುತ್ರಿ ರಮ್ಯಾ ಕುತ್ತಿಗೆಗೆ ತಾಯಿ ಸುಜಾತಾ ಮಚ್ಚಿನಿಂದ ಹಲ್ಲೆ ನಡೆಸಿದ್ದು, ರಮ್ಯಾ ಕುತ್ತಿಗೆ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
22 ವರ್ಷದ ರಮ್ಯಾ ತಾಯಿಯಿಂದಲೇ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ರಮ್ಯಾ ತನ್ನ ಗಂಡನ ಮನೆಯಲ್ಲಿ ಜಗಳ ವಾಡಿ ಗಂಡನನ್ನ ಬಿಟ್ಟು ತವರಿಗೆ ವಾಪಸ್ ಆಗಿದ್ದಳು. ಇದರಿಂದ ರೊಚ್ಚಿಗೆದ್ದ ತಾಯಿ ಸುಜಾತಾ ರಮ್ಯಾಳನ್ನ ತರಾಟೆಗೆ ತೆಗೆದುಕೊಳ್ಳುತ್ತಾನೆ. ನಂತರ ಸಿಕ್ಕ ಮಚ್ಚಿನಿಂದ ರಮ್ಯಾ ಕುತ್ತಿಗೆಗೆ ಮೇಲೆ ಭೀಕರವಾದ ದಾಳಿ ಮಾಡಿದ್ದಾರೆ. ಊರ ದೇವಸ್ಥಾನದ ಮುಂದೆ ತಾಯಿ ತನ್ನ ಮಗಳ ನೆತ್ತರು ಚೆಲ್ಲಾಡಿದ್ದಾಳೆ. ಹಲ್ಲೆ ನಡೆಸಿದ ಬಳಿಕ ಸರೋಜಮ್ಮ ಎಸ್ಕೇಪ್ ಆಗಿದ್ದು, ಪೊಲೀಸರು ಆಕೆಯ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಮತ್ತೊಂದು ಸ್ಫೋಟಕ ವಿಚಾರ ಪತ್ತೆಯಾಗಿದೆ. ಕಳೆದ ಒಂದು ತಿಂಗಳಿನಿಂದ ದೇವಸ್ಥಾನಕ್ಕೆ ಬಂದು ಬೆಳಗಿನಜಾವ ನಾಲ್ಕುಗಂಟೆಗೆ ಸುಜಾತ ಪೂಜೆ ಶುರು ಮಾಡುತ್ತಿದ್ದಳು. ಕಳೆದ ಎರಡು ಮೂರು ದಿನಗಳ ಹಿಂದಷ್ಟೇ ಮಗಳು ರಮ್ಯಾಳನ್ನ ಮನೆಗೆ ಕರೆಸಿಕೊಂಡಿದ್ದಳು. ಇಬ್ಬರೂ ಕೂಡ ಮೂರ್ನಾಲ್ಕು ದಿನಗಳಿಂದ ಪೂಜೆಗೆ ಬರ್ತಿದ್ರು. ಅದ್ರಂತೆ ಇಂದು ಬೆಳಗಿನ ಜಾವ ಕೂಡ ಇಬ್ಬರೂ ಪೂಜೆಗೆ ಬಂದಿದ್ರು. ಸಿಸಿಟಿವಿಯಲ್ಲಿ ಮಗಳೇ ಮಚ್ಚುಗಳನ್ನ ಹಿಡಿದುಕೊಂಡು ಬಂದಿದ್ದು ಪತ್ತೆಯಾಗಿದೆ. ಈ ವೇಳೆ ಇಬ್ಬರೂ ಕೂಡ ಒಬ್ಬರಿಗೊಬ್ಬರು ಹಲ್ಲೆ ಮಾಡಿಕೊಂಡಿರುವ ಶಂಕೆ ಇದೆ. ನಮಸ್ಕರಿಸುವ ವೇಳೆ ರಮ್ಯಾ ಕುತ್ತಿಗೆಗೆ ಮಚ್ಚು ಬೀಸಿರುವ ಸುಜಾತ, ನಂತರ ರಮ್ಯಾ ಕೂಡ ಸುಜಾತ ಮೇಲೆ ಹಲ್ಲೆ ಮಾಡಿರುವ ಮಾಹಿತಿ ಇದೆ. ಹಲ್ಲೆ ಪರಿಣಾಮ ಸುಜಾತ ಹಣೆಗೆ ಗಾಯವಾಗಿದೆ. ಸುಜಾತ ಗಾಯವಾಗಿ ರಕ್ತ ಸುರಿಸಿಕೊಂಡೇ ದೇವಸ್ಥಾನದಿಂದ ಕಾಲ್ಕಿತ್ತಿದ್ದಳು. ಸುಸ್ತಾಗಿ ನೇರವಾಗಿ ಮನೆಗೆ ಹೋಗಿದ್ದ ಸುಜಾತ. ಈ ಬಗ್ಗೆ ಮಾಹಿತಿ ಪಡೆದು ಸುಜಾತಳನ್ನ ವಶಪಡೆದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸ್ರಿಗೆ ಸಾಕಷ್ಟು ಅನುಮಾನ ಮೂಡಿದೆ. ಇಬ್ಬರೂ ಒಬ್ಬರಿಗೊಬ್ಬರು ಬಲಿ ಕೊಟ್ಟುಕೊಳ್ಳಲು ಮುಂದಾಗಿದ್ರಾ ಅನ್ನೋ ಅನುಮಾನ ಕೂಡ ಇದೆ. ಸದ್ಯ ಪ್ರಕರಣ ಸಂಬಂಧ ಸಂಪಿಗೇಹಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.