Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ನಟ ಯಶ್ ತಾಯಿ ಪುಷ್ಪಾ ಅವರು ನಿರ್ಮಾಣ ಮಾಡಿದ ”ಕೊತ್ತಲವಾಡಿ” ಸಿನಿಮಾ ಯಶಸ್ಸು ಪಡೆಯಲು ವಿಫಲವಾದ ಬಳಿಕ ಒಂದಲ್ಲ ಒಂದು ವಿವಾದದ ಮೂಲಕ ಸುದ್ದಿಯಾಗಿದೆ. ಈಗ ಮತ್ತೆ ಸುದ್ದಿಯಾಗಿರುವುದು ಚಿತ್ರದ ಪ್ರಚಾರಕ್ಕೆ ಹಣ ಪಡೆದು ಮೋಸ ಮಾಡಲಾಗಿದೆ ಎಂದು ಐವರ ವಿರುದ್ಧ ಪುಷ್ಪಾ ಅವರು ಕೇಸ್ ದಾಖಲಿಸಿದ್ದಾರೆ.
ಚಿತ್ರದ ಪಿ ಆರ್ ಒ ಹರೀಶ್ ಅರಸು ಸೇರಿ ಐವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಗಂಭೀರ ಆರೋಪ ಮಾಡಿದ್ದಾರೆ. ಮನು,ನಿತಿನ್, ಮಹೇಶ್ ಗುರು ಮತ್ತು ಸ್ವರ್ಣ ಲತಾ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗಿದೆ.
64 ಲಕ್ಷ ರೂ. ಹಣ ಪಡೆದು ಚಿತ್ರದ ಪ್ರಚಾರವನ್ನು ಸರಿಯಾಗಿ ಮಾಡಲಿಲ್ಲ, ಮಾತ್ರವಲ್ಲದೆ ಚಿತ್ರದ ಕುರಿತು ಅಪಪ್ರಚಾರ ಮಾಡಲಾಗಿದೆ. ಸರಿಯಾದ ಲೆಕ್ಕ ಕೊಟ್ಟಿಲ್ಲ. ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟು ಮನೆಯ ಬಳಿ ಬಂದು ಗಲಾಟೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪ ಮಾಡಿದ್ದಾರೆ.