Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಸಿಎಂ ಸ್ಥಾನ ಬದಲಾವಣೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಬಿಗಿಪಟ್ಟು ಹಿಡಿದಿದ್ದಾರೆ. ಮನೆಯಲ್ಲೇ ಕೂತು ಡಿಕೆ ಬ್ರದರ್ಸ್ ಮಿಂಚಿನ ಆಟ ಆದರಂಭಿಸಿದ್ದು, ಡಿಕೆ ಬ್ರದರ್ಸ್ ಹೈಕಮಾಂಡ್ ಭೇಟಿ ನಂತ್ರ ಒಕ್ಕಲಿಗ ನಾಯಕರು ಅಖಾಡಕ್ಕಿಳಿದಿದ್ದಾರೆ.
ಮಾಗಡಿ ಶಾಸಕ ಬಾಲಕೃಷ್ಣ ನೇತೃತ್ವದಲ್ಲಿ ಡಿಕೆ ಆಪ್ತರು ದೆಹಲಿ ದಂಡಯಾತ್ರೆ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಡಿಕೆಶಿ ಆಪ್ತರು ತೀವ್ರ ಒತ್ತಡ ಹೇರಲು ಮುಂದಾಗಿದ್ದಾರೆ.
ಒಕ್ಕಲಿಗ ಸಮುದಾಯಕ್ಕೆ ನ್ಯಾಯ ಕೊಡುವಂತೆ ಹೈಕಮಾಂಡ್ ಮೇಲೆ ತೀವ್ರ ಒತ್ತಡ ಹೇರಲು ಆನೇಕಲ್ ಶಾಸಕ ಶಿವಣ್ಣ, ನೆಲಮಂಗಲ ಶಾಸಕ ಶ್ರೀನಿವಾಸ್, ಕುಣಿಗಲ್ ರಂಗನಾಥ್, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಎಂಎಲ್ಸಿ ದಿನೇಶ್ ಗೂಳಿಗೌಡ ದೆಹಲಿ ಯಾತ್ರೆ ಕೈಗೊಂಡಿದ್ದು, ದೆಹಲಿಯಲ್ಲಿ ಎಐಸಿಸಿಎ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆ ಮಾತುಕತೆಗೆ ಮುಂದಾಗಿದ್ದಾರೆ. ಅದಾದ ನಂತರ ನಾಳೆ ಹೈಕಮಾಂಡ್ ಭೇಟಿಗೆ ಮುಂದಾಗಿದ್ದಾರೆ.
ಶುಕ್ರವಾರ ಬೆಳಗ್ಗೆ ಕೆ.ಸಿ. ವೇಣುಗೋಪಾಲ್ ಭೇಟಿಗೆ ಸಮಯ ನಿಗದಿಯಾಗಿದೆ. ಸಚಿವ ಚೆಲುವರಾಯಸ್ವಾಮಿ ಕೂಡ ಹೈಕಮಾಂಡ್ ಭೇಟಿಗೆ ಪ್ರಯತ್ನ ಮಾಡುತ್ತಿದ್ದಾರೆ. ಡಿಕೆಶಿ ಟೀಂ ಮಧ್ಯಾಹ್ನ 3 ಗಂಟೆಗೆ ದೆಹಲಿಗೆ ತೆರಳಿದೆ. ಈ ಮೂಲಕ ಡಿ.ಕೆ. ಶಿವಕುಮಾರ್ ಪರ ಆಪ್ತ ನಾಯಕರು ಅಖಾಡಕ್ಕಿಳಿದಿದ್ದು, ಸರ್ಕಾರಕ್ಕೆ ಎರಡೂವರೆ ವರ್ಷ ಬೆನ್ನಲ್ಲೇ ಪವರ್ ಶೇರಿಂಗ್ ಗದ್ದಲ ಜೋರಾಗಿದೆ.
ಡಿ.ಕೆ. ಶಿವಕುಮಾರ್ ಪರ ಧ್ವನಿ ಎತ್ತಲು ದೆಹಲಿಗೆ ದಂಡಯಾತ್ರೆ ಹೊರಟ ಡಿಕೆಶಿ ಬೆಂಬಲಿಗ ಶಾಸಕರು ಮತ್ತು MLC ಗಳು ಹಳೆ ಮೈಸೂರು ಭಾಗದವರು. ಡಿಕೆಶಿವಕುಮಾರ್ ಪರ ಬ್ಯಾಟಿಂಗ್ ಮಾಡಲು ದೆಹಲಿ ಪ್ರಯಾಣಿಸಿದ್ದು, ಶುಕ್ರವಾರ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಲಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ತುಂಬಿದೆ. ಹೀಗಾಗಿ ನವೆಂಬರ್ ಕ್ರಾಂತಿ ಸಿಎಂ ಬದಲಾವಣೆ ಬಗ್ಗೆ ಮಹತ್ವದ ಸಭೆಗಳು ಪಕ್ಷದೊಳಗೆ ನಡೆದಿದೆ ಎನ್ನಲಾಗಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್ ಹಂತಕ್ಕೆ ಬರುವ ಸೂಚನೆ ಇದೆ ಎನ್ನಲಾಗುತ್ತಿದ್ದು, ಸದಾಶಿವನಗರ ನಿವಾಸದಲ್ಲಿ ಕುಳಿತು ಡಿಕೆ ಬ್ರದರ್ಸ್ ಪೊಲಿಟಿಕಲ್ ಗೇಮ್ ಮಾಡುತ್ತಿದ್ದು, ಸುಮಾರು ಒಂದು ಗಂಟೆ ಡಿಕೆ ಬ್ರದರ್ಸ್ ರಹಸ್ಯ ಚರ್ಚೆ ನಡೆಸಿದ್ದಾರೆ. ಈ ಸಮಯದಲ್ಲಿ ಯಾರಿಗೂ ಭೇಟಿಗೆ ಸಮಯಾವಕಾಶ ನೀಡದೆ ಸೀಕ್ರೆಟ್ ಮೀಟಿಂಗ್ ನಡೆಸಿದ್ದಾರೆ.
ಮಾಜಿ ಸಂಸದ ಡಿಕೆ ಸುರೇಶ್ ಕೊಟ್ಟ ಮಾತಿನಂತೆ ನಡೆಯುವವರು ಸಿದ್ದರಾಮಯ್ಯ. ಅವರಿಗೂ ಜವಾಬ್ದಾರಿ ಇದೆ. ಸಿದ್ದರಾಮಯ್ಯ ಯಾರಿಗೂ ಕೊಟ್ಟ ಮಾತಿಗೆ ತಪ್ಪಿಲ್ಲ. ಹಿಂದಿನ ಸರ್ಕಾರದಲ್ಲಿ ಕೂಡ ಮಾತಿನ ಪ್ರಕಾರವೇ ನಡೆದಿದ್ದಾರೆ. ಈಗಿನ ಸರ್ಕಾರದಲ್ಲೂ ಕೂಡ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ. ಮುಂದೆಯೂ ಕೊಟ್ಟ ಮಾತಿನ ಪ್ರಕಾರವೇ ನಡೆದುಕೊಳ್ಳುತ್ತಾರೆ. ಅದೃಷ್ಟ ಇದ್ದರೆ ನನ್ನಣ್ಣ ಸಿಎಂ ಆಗ್ತಾನೆ. ಎಲ್ಲದಕ್ಕೂ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡುತ್ತದೆ ಎಂದರು.
ಸರ್ಕಾರ ಎರಡೂವರೆ ವರ್ಷ ಪೂರೈಕೆ ವಿಚಾರವಾಗಿ ಮಾತನಾಡಿದ ಡಿ.ಕೆ. ಸುರೇಶ್, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. ಇವತ್ತಿಗೆ (ನ.20) ಎರಡೂವರೆ ವರ್ಷ ತುಂಬಿದೆ. ನಾವು ಕೊಟ್ಟ ಮಾತಿನಂತೆ ಸಿಎಂ ಗ್ಯಾರಂಟಿಯನ್ನು ಅನುಷ್ಠಾನ ಮಾಡಿದ್ದಾರೆ. ಅವರು ಏನು ಮಾತು ಕೊಟ್ಟಿದ್ದಾರೆ. ಆ ಮಾತಿನಂತೆ ನಡೆದುಕೊಂಡಿದ್ದಾರೆ ಎಂದರು.
ಸೊಸೆಯನ್ನು ಮಗಳಂತೆ ನೋಡಬೇಕಾದ ಮಾವನೇ ಮಂಚಕ್ಕೆ ಕರೆದ; ಅರೆಬರೆ ಬಟ್ಟೆ ಹಾಕೊಂಡು ಬಾ; ಗಂಡನ ಬದಲು ನಾನು ಬರುತ್ತೇನೆ ಎಂದ
ಗುಡ್ ನ್ಯೂಸ್; ಮತ್ತೊಮ್ಮೆ ಟ್ರಾಫಿಕ್ ದಂಡದಲ್ಲಿ ಶೇಕಡ 50ರಷ್ಟು ಡಿಸ್ಕೌಂಟ್