Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿಕ್ಕಬಳ್ಳಾಪುರ: ವಿವಾಹಿತ ಒಂಟಿ ಮಹಿಳೆಯರನ್ನು ಮರು ಮದುವೆ ಮಾಡಿಕೊಳ್ಳುವ ನೆಪದಲ್ಲಿ ಜಿಲ್ಲೆಯ ಚಿಂತಾಮಣಿ ನಗರದ ಯುವಕನೋರ್ವ, ಲಕ್ಷ ಲಕ್ಷ ಹಣ ಪಡೆದು ಮೋಸ ಮಾಡಿರುವ ಘಟನೆ ನಡೆದಿದೆ.
ಫೇಸ್ಬುಕ್ನಲ್ಲಿ ಬಂದ ರಿಕ್ವೆಸ್ಟ್ ಎಕ್ಸ್ಪೆಟ್ ಮಾಡಿ ಇವರೆಲ್ಲಾ ಮೋಸದ ಬಲೆಗೆ ಬಿದ್ದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸಿ.ಎಂ.ಗಿರಿ ಅಲಿಯಾಸ್ ಸಾಯಿಸುದೀಪ್ ಎನ್ನುವ ನಯವಂಚಕ ಇವರೆಲ್ಲರಿಗೂ ಒಂದಲ್ಲಾ ಒಂದು ರೀತಿಯಲ್ಲಿ ವಂಚಿಸಿ ಹಣ ಪಡೆದು, ಕಿರುಕುಳ ನೀಡಿದ್ದನಂತೆ. ಇದರಿಂದ ಬೇಸತ್ತು ಈಗ ನ್ಯಾಯಕ್ಕಾಗಿ ಸಂತ್ರಸ್ಥರಲ್ಲಿ 3 ಮಹಿಳೆಯರು ಚಿಂತಾಮಣಿ ನಗರ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ.
ಅಸಲಿಗೆ ಚಿಂತಾಮಣಿಯ ಸಿ.ಎಂ.ಗಿರೀಶ್ ಅಲಿಯಾಸ್ ಸಾಯಿಸುದೀಪ್ ಎನ್ನುವ ನಯವಂಚಕ ಒಬ್ಬಂಟಿ ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿ, ಫೇಸ್ಬುಕ್ ಮೂಲಕ ಪರಿಚಯ ಮಾಡಿಕೊಂಡು ಚಿನ್ನ, ರನ್ನ, ಬಂಗಾರ, ನೀನೇ ನನ್ನ ಜೀವನದ ಸಿಂಗಾರಿ ಎಂದು ನಂಬಿಸಿ ಮರುಮದುವೆ ಮಾಡಿಕೊಳ್ಳುವ ನೆಪದಲ್ಲಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದು, ಜತೆಗೆ ವಿಡಿಯೋ, ಆಡಿಯೋಗಳನ್ನು ಇಟ್ಟುಕೊಂಡಿದ್ದಾನೆ.
ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿ ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿರುವ ಆರೋಪ ಕೇಳಿಬಂದಿದೆ.
ಸದ್ಯ ಯುವಕನಿಂದ ನೊಂದ ಮೂರು ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದಾರೆ.