Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > decline in male fertility ಪುರುಷರ ಫಲವತ್ತತೆ ಗಣನೀಯ ಕುಸಿತ: ಇದಕ್ಕೇನು ಕಾರಣ? ಹೊಸ ಸಂಶೋಧನೆ ಹೇಳಿದ್ದೇನು?
ಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ವಿದೇಶ

decline in male fertility ಪುರುಷರ ಫಲವತ್ತತೆ ಗಣನೀಯ ಕುಸಿತ: ಇದಕ್ಕೇನು ಕಾರಣ? ಹೊಸ ಸಂಶೋಧನೆ ಹೇಳಿದ್ದೇನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇತ್ತೀಚಿನ ದಿನಗಳಲ್ಲಿ ಪುರುಷರ ಫಲವತ್ತತೆ ದರಗಳು ಗಣನೀಯವಾಗಿ ಕುಸಿಯುತ್ತಿದ್ದು, ಈ ಕುಸಿತಕ್ಕೆ ಸಂಬಂಧಿಸಿದ ಹೊಸ ಸಂಶೋಧನೆಯೊಂದು ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ.

ಕೃಷಿಯಲ್ಲಿ ವ್ಯಾಪಕವಾಗಿ ಬಳಸುವ ಸಾಮಾನ್ಯ ನಿಯೋನಿಕೋಟಿನಾಯ್ಡ್ಸ್ ಎಂಬ ಕೀಟನಾಶಕಗಳು ಪುರುಷರ ಸಂತಾನೋತ್ಪತ್ತಿ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿವೆ. ವೀರ್ಯಾಣುಗಳ ಸಂಖ್ಯೆಯನ್ನು ನಿರಂತರವಾಗಿ ಕಡಿಮೆ ಮಾಡುತ್ತಿವೆ ಎಂದು ಅಧ್ಯಯನಗಳು ಹೇಳಿವೆ.

ಈ ಕೀಟನಾಶಕಗಳು ಪ್ರಯೋಗಾಲಯದಲ್ಲಿ ಬೆಳೆಸಿದ ಗಂಡು ಪ್ರಾಣಿಗಳ ವೀರ್ಯಾಣುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತವೆ. ಅವುಗಳ ಸಂತಾನೋತ್ಪತ್ತಿ ವ್ಯವಸ್ಥೆಗೆ ಹಾನಿ ಮಾಡುತ್ತವೆ ಎಂಬುದನ್ನು ಸಂಶೋಧಕರು ದೃಢಪಡಿಸಿದ್ದಾರೆ.

ಈ ರಾಸಾಯನಿಕಗಳ ವ್ಯಾಪಕ ಬಳಕೆಯಿಂದಾಗಿ, ಅವು ಮನುಷ್ಯರ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ನಡೆದ ಅಧ್ಯಯನಗಳ ಸಾರಾಂಶವನ್ನು ಒಳಗೊಂಡಿರುವ ಹೊಸ ವಿಮರ್ಶೆಯು ‘ಎನ್ವಿರಾನ್ಮೆಂಟಲ್ ರಿಸರ್ಚ್ ಜರ್ನಲ್’ನಲ್ಲಿ ಪ್ರಕಟಗೊಂಡಿದೆ. ಈ ವಿಮರ್ಶೆ 2005 ಮತ್ತು 2025 ರ ನಡುವೆ ನಡೆಸಲಾದ 21 ಪ್ರಯೋಗಗಳನ್ನು ವಿಶ್ಲೇಷಿಸಿದ್ದು, ನಿಯೋನಿಕೋಟಿನಾಯ್ಡ್ ರಾಸಾಯನಿಕಗಳಿಗೆ ಒಡ್ಡಿಕೊಂಡ ಗಂಡು ಇಲಿಗಳ ವೀರ್ಯಾಣುಗಳ ಸಂಖ್ಯೆ, ಚಲನಶೀಲತೆ ಮತ್ತು ರಚನೆಯ ಮೇಲೆ ನಕಾರಾತ್ಮಕ ಪರಿಣಾಮಗಳನ್ನು ಎದುರಿಸಿವೆ. ಅಷ್ಟೇ ಅಲ್ಲ, ಅವುಗಳಲ್ಲಿ ವೃಷಣ ಅಂಗಾಂಶಕ್ಕೆ ಹಾನಿಯಾಗಿರುವುದು ಸಹ ದೃಢಪಟ್ಟಿದೆ.

ಆಹಾರದಲ್ಲಿನ ಕೀಟನಾಶಕಗಳ ಉಳಿಯುವಿಕೆ ಕ್ರಮೇಣ ಫಲವತ್ತತೆಯ ಮೇಲೆ ಪರಿಣಾಮ ಬೀರುವುದರಿಂದ ಈ ಅಧ್ಯಯನವು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ ಎಂದು ಸಂಶೋಧನೆ ಹೇಳಿದೆ.

ಈ ಸಂಶೋಧನೆಯು ಪ್ರಾಣಿಗಳ ಮೇಲೆ ನಡೆಸಿದ್ದರೂ, ಎಲ್ಲಾ ಸಸ್ತನಿಗಳಲ್ಲಿ ವೀರ್ಯ ಉತ್ಪಾದನೆಯ ಪ್ರಕ್ರಿಯೆಯು ಒಂದೇ ಆಗಿರುತ್ತದೆ. ಆದ್ದರಿಂದ ಪ್ರಾಣಿಗಳಲ್ಲಿ ಕಂಡುಬರುವ ಪರಿಣಾಮಗಳು ಮನುಷ್ಯರ ಆರೋಗ್ಯಕ್ಕೂ ಕಳವಳಕಾರಿ ವಿಷಯವಾಗಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ಮೂರು ವರ್ಷಕ್ಕಿಂತ ಮೇಲ್ಪಟ್ಟ ಅರ್ಧದಷ್ಟು ಜನರ ದೇಹದಲ್ಲಿ ಈ ನಿಯೋನಿಕೋಟಿನಾಯ್ಡ್‌ಗಳ ರಾಸಾಯನಿಕ ಕುರುಹುಗಳು ಕಂಡುಬಂದಿವೆ. ಮಕ್ಕಳಲ್ಲಿ ಇದರ ಪ್ರಮಾಣ ಇನ್ನೂ ಹೆಚ್ಚಾಗಿದೆ. ಈ ಕೀಟನಾಶಕಗಳು ಸಸ್ಯಗಳಲ್ಲಿ ಸಂಪೂರ್ಣವಾಗಿ ಹೀರಲ್ಪಡುವುದರಿಂದ, ಹಣ್ಣುಗಳು ಮತ್ತು ತರಕಾರಿಗಳನ್ನು ನೀರಿನಲ್ಲಿ ತೊಳೆದರೂ ಸಹ ಅವುಗಳ ಕುರುಹುಗಳು ಉಳಿದಿರುತ್ತವೆ.

ಸಂಶೋಧನೆಯ ಪ್ರಕಾರ, ಈ ರಾಸಾಯನಿಕಗಳು ದೇಹದಲ್ಲಿ ಆಕ್ಸಿಡೇಟಿವ್ ಒತ್ತಡವನ್ನು ಹೆಚ್ಚಿಸುತ್ತವೆ. ಇದು ವೀರ್ಯ ಕೋಶಗಳು ಮತ್ತು ಡಿಎನ್‌ಎಗೆ ಹಾನಿಯನ್ನುಂಟುಮಾಡಿ, ಹಾರ್ಮೋನ್ ಸಿಗ್ನಲಿಂಗ್ ಮೇಲೆ ಪರಿಣಾಮ ಬೀರುವುದರಿಂದ ವೀರ್ಯ ಉತ್ಪಾದನೆಯನ್ನು ಅಡ್ಡಿಪಡಿಸುತ್ತವೆ. ಇದು ವೀರ್ಯ ಚಲನಶೀಲತೆ ಮತ್ತು ಪುರುಷರ ಫಲವತ್ತತೆ ಕಡಿಮೆಯಾಗಲು ಕಾರಣವಾಗುತ್ತದೆ ಎಂದು ಸಂಶೋಧನೆ ಸ್ಪಷ್ಟಪಡಿಸಿದೆ.

ಒಂದು ತಿಂಗಳು ಬೀಟ್‌ರೂಟ್ ಜ್ಯೂಸ್ ಕುಡಿದರೆ ಏನಾಗುತ್ತೆ?

ಲೈಂಗಿಕ ಸಮಸ್ಯೆ ಪರಿಹರಿಸುವುದಾಗಿ 48 ಲಕ್ಷ ರೂ. ವಂಚನೆ : ಔಷಧಿಯಿಂದ ಕಿಡ್ನಿ ಕಳೆದುಕೊಂಡ ಟೆಕ್ಕಿ

TAGGED:Significant decline in male fertility: What is the reason for this? What does new research say?
Share This Article
Facebook Twitter Copy Link Print
Previous Article ಸುಖಿ ದಾಂಪತ್ಯ ನಿಮ್ಮದಾಗಲು ಈ ತತ್ವಗಳನ್ನು ಪಾಲಿಸಿ
Next Article 262 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ಇಬ್ಬರು ಅರೆಸ್ಟ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?