Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
29 ಕೋಟಿ ರೂ. ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಂಗಳವಾರ ಸಮಗ್ರ
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 29 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿದೆ ಎಂದರು.
16 ಕೋಟಿ ವೆಚ್ಚದಲ್ಲಿ ದಾಸೋಹ ಭವನ, 1.96 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ, 3.53 ಕೋಟಿ ವೆಚ್ಚದಲ್ಲಿ ರಥ ಬೀದಿ ಅಭಿವೃದ್ಧಿ, 1.62 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಮೇಲ್ದರ್ಜೆರಿಗೇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
28 ಲಕ್ಷ ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ನೀರಿನ ಟ್ಯಾಂಕ್ ನಿರ್ಮಾಣ ಮಾಡಲಾಗುವುದು. 43 ಲಕ್ಷ ವೆಚ್ಚದಲ್ಲಿ ಹೊಸ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದರು.
ಅಲ್ಲದೆ ಈ ಬಾರಿ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ನ.25ರ ಗುರುವಾರ ನಡೆಯಲಿದೆ. ಈ ಬಾರಿ ವಿಶೇಷವಾಗಿ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
ಡಿಸೆಂಬರ್ 1ರಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸುವ ವಾಹನಗಳ ಸುಂಕ ವಸೂಲಾತಿ ರದ್ದುಗೊಳಿಸಿ, ಉಚಿತವಾಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಹಿರಿಯ ನಾಗರಿಕರು, ವಿಶಿಷ್ಟಚೇತನರು, ವರ್ಷದೊಳಗಿನ ಶಿಶುಗಳ ತಾಯಂದಿರಿಗೆ ಮತ್ತು ಗರ್ಭಿಣಿಯರಿಗೆ ವಿಶೇಷ ದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಈ ಬಾರಿ ರಾಸುಗಳ ಜಾತ್ರೆ ಡಿ. 10ರಿಂದ 18ರವರೆಗೆ ನಡೆಯಲಿದೆ. ರಾಸುಗಳ ಜಾತ್ರಾ ಸಮಯದಲ್ಲಿ ವಿಶೇಷ ದೀಪಾಲಂಕಾರ, ರೈತರಿಗೆ ಮತ್ತು ರಾಸುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ರಾಸುಗಳಿಗೆ ರೋಗಗಳು ಹರಡದಂತೆ ಪಶು ವೈದ್ಯರ ವ್ಯವಸ್ಥೆ ಕಲ್ಪಿಸಲಾಗುವುದು. ರಾಸುಗಳ ಜಾತ್ರೆಗೆ ಆಗಮಿಸುವ ರೈತರಿಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದಲೇ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ಮಾಹಿತಿ ನೀಡಿದರು.
ಈ ವೇಳೆ ಸಚಿವ ಮುನಿಯಪ್ಪ, ಮುಜರಾಯಿ ಆಯುಕ್ತ ಶರತ್, ಜಿಲ್ಲಾಧಿಕಾರಿ ಬಸವರಾಜು ಎ.ಬಿ., ಕಾರ್ಯನಿರ್ವಹಣಾಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.
ಇದೆಂಥಾ ಶಿಕ್ಷೆ….ಹೋಂ ವರ್ಕ್ ಮಾಡಿಲ್ಲವೆಂದು 4 ವರ್ಷದ ಮಗುವನ್ನು ಮರಕ್ಕೆ ನೇತುಹಾಕಿದ ಶಿಕ್ಷಕರು- ವೈರಲ್ ವಿಡಿಯೋ ನೋಡಿ
ಸಿಡಿದ ಇಥಿಯೋಪಿಯಾದ ಜ್ವಾಲಾಮುಖಿ ಪರ್ವತ: ಭಾರತದತ್ತ ಬೂದಿ, ಏರ್ಪೋರ್ಟ್ಗಳಿಗೆ ಸಿಕ್ಕ ಸೂಚನೆ ಏನು?