Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಜತೆಗೆ ಪಕ್ಷದೊಳಗೇ ಬಣ ರಾಜಕೀಯ ಶುರುವಾಗಿದೆ.
ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ ಶಿವಕುಮಾರ್ ಪರ ಎಂದು ಬೆಂಬಲಿಗರು ಕುರ್ಚಿಗಾಗಿ ಬೇಡಿಕೆಗಳನ್ನು ಇಡುತ್ತಿದ್ದಾರೆ.
ಈ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ, ರಹಸ್ಯವಾಗಿಯೇ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ನಲ್ಲಾಗುತ್ತಿರುವ ವಿದ್ಯಮಾನಗಳ ಬಗ್ಗೆ ವಿವರಿಸಿದ್ದಾರೆ.
ಈ ವೇಳೆ, ರಾಹುಲ್ ಗಾಂಧಿ ಹೇಳಿರುವ ಸಂದೇಶವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಚರ್ಚಿಸಿದ್ದಾರೆ.
ರಾಹುಲ್ ಗಾಂಧಿ ಭೇಟಿ ಮಾಡಿ ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕ್ ಖರ್ಗೆ, ನೇರವಾಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ರಾಹುಲ್ ಕೊಟ್ಟ ಸಂದೇಶವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಸುಮಾರು ಅರ್ಧ ಗಂಟೆ ಚರ್ಚಿಸಿದ ಬಳಿಕ ಪ್ರಿಯಾಂಕ್ ಖರ್ಗೆ ನೇರವಾಗಿ ಡಿಸಿಎಂ ನಿವಾಸಕ್ಕೆ ತೆರಳಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ರಾಹುಲ್ ಗಾಂಧಿ ಹೇಳಿರುವುದನ್ನು ಡಿಕೆಶಿ ಗಮನಕ್ಕೆ ತಂದಿದ್ದಾರೆ.
ತಮಿಳುನಾಡಿಗೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ – ಚೆನ್ನೈಗೆ ಯೆಲ್ಲೋ ಅಲರ್ಟ್ ಘೋಷಣೆ
ಸ್ಮೃತಿ ಮಂಧಾನ ಮದುವೆ ಬಗ್ಗೆ ವದಂತಿಗಳ ನಡುವೆ ಪಲಾಶ್ ಮುಚ್ಚಲ್ ತಾಯಿಯ ಅಚ್ಚರಿ ಹೇಳಿಕೆ!
Adah Sharma Fans shocked ಅದಾ ಶರ್ಮಾ ವಿಕ್ರಮ ಕಂಡು ಬೆಚ್ಚಿಬಿದ್ದ ಫ್ಯಾನ್ಸ್, ವಿಡಿಯೋ ನೋಡಿ