Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮೈಸೂರು: ಇನ್ನೆರಡು ದಿನಗಳಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗದೆ ಇದ್ದಲ್ಲಿ ಈ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗೋಕೆ ಸಾಧ್ಯವಿಲ್ಲ. ಇದನ್ನು ಅವರ ಗ್ರಹಗತಿಗಳೇ ಹೇಳುತ್ತಿವೆ ಎಂದು ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಮೈಸೂರಿನಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ರಾಜ್ಯಲಕ್ಷ್ಮಿ ಪೀಠ ಪ್ರಾಪ್ತ್ಯರ್ಥ ಸಂಕಲ್ಪ ಪೂಜೆ ನೆರವೇರಿಕೆ ಮಾಡಲಾಗಿದೆ. ಹುಡ್ಕೋ ಬಡಾವಣೆಯ ನವಗ್ರಹ ಸಹಿತ ಬಲಮುರಿ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಲಾಗಿದೆ. ಗಣಪತಿ ಹಾಗೂ ಲಲಿತಾ ತ್ರಿಪುರಸುಂದರಿ ದೇವಿಗೆ ಪೂಜೆ ಮಾಡಲಾಗಿದೆ. ಪೂಜೆ ಮೂಲಕ ಮುಖ್ಯಮಂತ್ರಿ ಪದವಿ ಪ್ರಾಪ್ತಿಗೆ ಸಂಕಲ್ಪ ಮಾಡಿಕೊಳ್ಳಲಾಗಿದೆ ಎಂದರು.
ಪೂಜೆಯ ಬಳಿಕ ಮಾತನಾಡಿದ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು, ಇನ್ನು ಎರಡು ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಅದಕ್ಕಾಗಿ ಸಂಕಲ್ಪ ಪೂಜೆ ಮಾಡಿದ್ದೇವೆ. ದೇವಿ ಕೂಡ ಬಲಗಡೆಯಿಂದ ಹೂ ವರ ಕೊಟ್ಟು ಆಶೀರ್ವಾದ ಮಾಡಿದ್ದಾಳೆ. ಡಿ.ಕೆ.ಶಿವಕುಮಾರ್ ಖಂಡಿತ ಮುಖ್ಯಮಂತ್ರಿ ಆಗುತ್ತಾರೆ. ಇದು ನೂರಕ್ಕೆ ಸಾವಿರ ಪಟ್ಟು ಆಗುತ್ತೆ. ಯಾರು ಏನೇ ಮಾಡಿದರೂ ದೈವ ಸಂಕಲ್ಪದ ಮುಂದೆ ಯಾವುದೂ ನಡೆಯೋದಿಲ್ಲ ಎಂದು ಹೇಳಿದ್ದಾರೆ.
ಅವರು ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಆಗುವುದು ಶತಃಸಿದ್ಧ. ಇದನ್ನು ಅವರ ಗ್ರಹಗತಿಗಳು ಹೇಳುತ್ತಿವೆ. ಮಕರ ರಾಶಿಯಿಂದ ಮೂರನೇ ರಾಶಿಯಾದ ಮೀನ ರಾಶಿಯಲ್ಲಿ ಶನೇಶ್ವರ ಇರುವುದು ಲಾಭ ಸ್ಥಾನ, ಶುಭ್ರಪ್ರದವಾಗಿದೆ. ಇದರಿಂದ ಅವರಿಗೆ ಅಧಿಕಾರ ಪ್ರಾಪ್ತಿಯಾಗುವುದು ಶತಃಸಿದ್ಧ. ಒಂದು ವೇಳೆ ಈಗ ಆಗಲಿಲ್ಲ ಎಂದರೆ ಜನ್ಮದಲ್ಲಿ ಅವರು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
Ghati Subrahmanya 29 ಕೋಟಿ ವೆಚ್ಚದಲ್ಲಿ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ
ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾದ ಕರ್ನಾಟಕ ಸರ್ಕಾರ