Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ವಿವಾಹವನ್ನು ಮುರಿದುಬಿದ್ದಿದೆ ಎಂದರ್ಥವಲ್ಲ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಾಲಾ ಬಾಗ್ಚಿ ಅವರಿದ್ದ ಪೀಠವು ನವೆಂಬರ್ 14 ರಂದು ಆದೇಶ ಹೊರಡಿಸಿದ್ದು, ಪತಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಗೆ ಅಸ್ತು ಎನ್ನುವ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದೆ ಮತ್ತು ಈ ವಿಷಯವನ್ನು ಹೊಸದಾಗಿ ಪರಿಗಣಿಸಲು ಹೈಕೋರ್ಟ್ ಪೀಠಕ್ಕೆ ನಿರ್ದೇಶನ ನೀಡಿದೆ.
ಇತ್ತೀಚಿನ ದಿನಗಳಲ್ಲಿ, ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದರೆ ವೈವಾಹಿಕ ಸಂಬಂಧ ಮುರಿದು ಹೊಗಿದೆ ಎಂದು ಭಾವಿಸಲಾಗುತ್ತಿದೆ. ವೈವಾಹಿಕ ಸಂಬಂಧವನ್ನು ಮುರಿಯಲು ಇಬ್ಬರಲ್ಲಿ ಯಾರು ಕಾರಣ ಎಂಬುದನ್ನು ನ್ಯಾಯಾಲಯಗಳು ಕಂಡುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕ್ರೌರ್ಯ’ದ ಆಧಾರದ ಮೇಲೆ ವಿಚ್ಛೇದನಕ್ಕೆ ತನ್ನ ಪತಿಯ ಅರ್ಜಿಯನ್ನು ಅನುಮತಿಸಿದ ಉತ್ತರಾಖಂಡ ಹೈಕೋರ್ಟ್ನ ಆದೇಶದ ವಿರುದ್ಧ ಮಹಿಳೆಯೊಬ್ಬರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ತನ್ನ ಹೆಂಡತಿಯಿಂದ ಮಾನಸಿಕ ಹಿಂಸೆ ಅನುಭವಿಸಿದ್ದೇನೆ ಎಂಬ ಪತಿಯ ಹೇಳಿಕೆಯನ್ನು ನ್ಯಾಯಾಲಯವು ಒಪ್ಪಿಕೊಂಡಿತ್ತು.