Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಶೀಘ್ರದಲ್ಲೇ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕವೂ ಸೇರಿ ದಕ್ಷಿಣದ ರಾಜ್ಯಗಳಲ್ಲಿ ಮತ್ತೆ ಜನಜೀವನ ಅಸ್ತವ್ಯಸ್ತಗೊಳಿಸಲು ದಿತ್ವಾ ಚಂಡಮಾರುತ ರೆಡಿಯಾಗಿದೆ. ನವೆಂಬರ್ 30 ರಂದು ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಿತ್ವಾ ಚಂಡಮಾರುತ ತಮಿಳುನಾಡಿನ ಚೆನ್ನೈನಿಂದ 750 ಕಿಲೋಮೀಟರ್ ದೂರದ ಪುಟ್ಟುವಿಲ್ ಬಳಿ ರೂಪುಗೊಂಡಿದೆ. ಉತ್ತರ ತಮಿಳುನಾಡು ಕರಾವಳಿ ತೀರ ಭಾಗ ಹಾಗೂ ದಕ್ಷಿಣ ಆಂಧ್ರದ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ. ನವೆಂಬರ್ 30ರಿಂದ ದಿತ್ವಾ ಮಳೆ ಅಬ್ಬರ ಆರಂಭಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ತಮಿಳುನಾಡು, ಆಂಧ್ರ ಪ್ರದೇಶ ಕರಾವಳಿ ತೀರ ಪ್ರದೇಶಗಳಿಗೆ ಅಪ್ಪಳಿಸುವ ಕಾರಣ ಇದರ ಪರಿಣಾಮ ಬೆಂಗಳೂರು ಸೇರಿ ಕರ್ನಾಟಕದ ಮೇಲೂ ಇರಲಿದೆ. ಈಗಾಗಲೇ ತಮಿಳುನಾಡು ಹಾಗೂ ಆಂದ್ರ ಪ್ರದೇಶದ ಕೆಲವೆಡೆ ಮಳೆಯಾಗುತ್ತಿದೆ. ನವೆಂಬರ್ 30 ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ.
ಈ ಹೊಸ ಚಂಡಮಾರುತಕ್ಕೆ ‘ದಿತ್ವಾ ಚಂಡಮಾರುತ’ ಎಂದು ಹೆಸರಿಡಲಾಗುತ್ತದೆ. ಇದರ ಭೂಸ್ಪರ್ಶದ ಸಮಯ ಇನ್ನೂ ಖಚಿತವಾಗಿಲ್ಲ. ಆದರೆ, ಈ ವಾರದ ಅಂತ್ಯದಲ್ಲಿ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯಲ್ಲಿ ಭಾರೀ ಮಳೆ, ಗಂಟೆಗೆ 80-90 ಕಿ.ಮೀ ವೇಗದ ಗಾಳಿ ಮತ್ತು ಅಲೆಗಳ ಅಬ್ಬರ ಕಂಡುಬರುವ ನಿರೀಕ್ಷೆಯಿದೆ.
ದಿತ್ವಾ ಹೆಸರನ್ನು ಯೆಮೆನ್ ದೇಶ ಸಲ್ಲಿಕೆ ಮಾಡಿದೆ. ಪ್ರಮುಖವಾಗಿ ಭಾರತದ ಸಮುದ್ರದ ಉತ್ತರ ಭಾಗದಲ್ಲಿ ರೂಪುಗೊಂಡಿರುವ ಚಂಡಮಾರುತಕ್ಕೆ ಧಿತ್ವಾ ಎಂದು ಹೆಸರಿಡಲಾಗಿದೆ. ತಮಿಳುನಾಡಿನ ಚೆನ್ನೈ, ನಾಗಪಟ್ಟಿಣಂ, ತಿರುವಲ್ಲೂರು, ತಂಜಾವೂರು ಸೇರಿದಂತೆ ಹಲವು ಭಾಗದಲ್ಲಿ ನವೆಂಬರ್ 27, 28 ಹಾಗೂ 29 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
Karnataka politics ಸಿದ್ದರಾಮಯ್ಯ ನಡೆಗೆ ರಾಹುಲ್ ಅಸಮಾಧಾನಗೊಂಡ್ರಾ? ಸಿಎಂ ಸ್ಥಾನ ಬಿಟ್ಟುಕೊಡಬೇಕಾಗತ್ತಾ?
New Trend ಈ ರೆಸ್ಟೋರೆಂಟ್ಗೆ ಒಬ್ಬರೇ ಹೋಗುವಂತಿಲ್ಲ! ಹೋದರೂ ಊಟ ಸಿಗಲ್ಲ! ಏನಿದು ಹೊನ್ಬಾಪ್?