Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ.
Bengaluru Water Supply Regulations, 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್ಮೆಂಟ್ (One Time Settlement) ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
‘ಔಷಧಗಳು ಮತ್ತು ಸೌಂದರ್ಯವರ್ಧಕಗಳು (Drugs and cosmetics) (ಕರ್ನಾಟಕ ತಿದ್ದುಪಡಿ) ವಿಧೇಯಕ, 2025″ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕೇಂದ್ರದ ಔಷಧ ಪ್ರಯೋಗಾಲಯಗಳ ಮತ್ತು ನಿರ್ದೇಶಕರು ಔಷಧ ಮತ್ತು ಸೌಂದರ್ಯವರ್ದಕಗಳು ಇವರ ಕೆಲಸ ಕಾರ್ಯಗಳನ್ನು ರಾಜ್ಯ ಸರ್ಕಾರ ಗೊತ್ತುಪಡಿಸಿದ ಪ್ರಾಧಿಕಾರ ಅಥವಾ ಅಂಥ ಅಧಿಕಾರಿಯಿಂದ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದಾಗಿದೆ. ಯಾವ ವ್ಯಕ್ತಿಯಿಂದ ಔಷಧ ಮತ್ತು ಸೌಂದರ್ಯ ವರ್ಧಕಗಳನ್ನು ವಶಪಡಿಸಿಕೊಳ್ಳಲಾಗುವುದೊ ಆ ವ್ಯಕ್ತಿಯು ತಾನು ತಪ್ಪು ವ್ಯಾಪಾರದ ಮುದ್ರೆ ಅಥವಾ ಕಲಬೆರಕೆಯ ಔಷಧ ಅಥವಾ ಸೌಂದರ್ಯ ವರ್ದಕ ಹೊಂದಿಲ್ಲವೆಂದು ಸಾಬೀತುಪಡಿಸುವ ಜವಾಬ್ದಾರಿ ಅವನ ಮೇಲೆಯೇ ಹೊರಿಸಲಾಗುವುದು ಎಂದರು.
Singles, be careful ಅವಿವಾಹಿತರೇ, ಮ್ಯಾಟ್ರಿಮೋನಿ ಸೈಟ್ನಲ್ಲಿ ಹುಷಾರಾಗಿರಿ- ಕೇಂದ್ರ ಸರ್ಕಾರ ಎಚ್ಚರಿಕೆ
Karnataka politics ಸಿದ್ದರಾಮಯ್ಯ ನಡೆಗೆ ರಾಹುಲ್ ಅಸಮಾಧಾನಗೊಂಡ್ರಾ? ಸಿಎಂ ಸ್ಥಾನ ಬಿಟ್ಟುಕೊಡಬೇಕಾಗತ್ತಾ?
Cyclone Ditva ಇನ್ನೆರಡು ದಿನಗಳಲ್ಲಿ ಬರಲಿದೆ ದಿತ್ವಾ ಚಂಡಮಾರುತ, ನ.30ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ