Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಸಿಎಂ ಕುರ್ಚಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಇದರಿಂದ ಕರ್ನಾಟಕ ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದೆ. ಇದರ ಮಧ್ಯೆಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ
ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಕೆ ಶಿವಕುಮಾರ್ ಬರೆದುಕೊಂಡಿದ್ದಾರೆ. ವರ್ಡ್ ಪವರ್ ಈಸ್ ವರ್ಲ್ಡ್ ಪವರ್. ಅದು ನ್ಯಾಯಾಧೀಶರಾಗಿರಲಿ, ಅಧ್ಯಕ್ಷರಾಗಿರಲಿ ಅಥವಾ ನಾನೂ ಸೇರಿದಂತೆ ಯಾರೇ ಆಗಿರಲಿ, ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ರಾಹುಲ್ ಗಾಂಧಿ ಜತೆ ಡಿಕೆ ಶಿವಕುಮಾರ್ ಸಹ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆ ಮಾತುಕತೆ ಗುಟ್ಟನ್ನು ಬಿಟ್ಟುಕೊಡ ಡಿಕೆ ಶಿವಕುಮಾರ್, ‘ರಾಹುಲ್ ಗಾಂಧಿಯವರು ನನ್ನೊಂದಿಗೆ ಏನು ಸಂವಹನ ಮಾಡಿದ್ದಾರೆ ಎಂಬುದು ಮಾಧ್ಯಮದಲ್ಲಿ ಮಾತನಾಡುವ ವಿಚಾರವಲ್ಲ, ಹೇಳುವ ಅವಶ್ಯಕತೆಯೂ ಇಲ್ಲ’ ಎಂದಿದ್ದಾರೆ.