Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಇಂದು ಉಡುಪಿಗೆ ಆಗಮಿಸಲಿದ್ದು, 40 ನಿಮಿಷ ಮುಂಚಿತವಾಗಿಯೇ ಉಡುಪಿಗೆ ಭೇಟಿ ನೀಡಲಿದ್ದಾರೆ.ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ 11.30 ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಕೃಷ್ಣಮಠದ ವಿಶ್ವಪರ್ಯಾಯ ನಡೆಯುತ್ತಿದ್ದು, ಇದರ ಭಾಗವಾಗಿ ಲಕ್ಷ ಕಂಠ ಗೀತಾ ಪರಾಯಣ ಹಮ್ಮಿಕೊಳ್ಳಲಾಗಿದೆ. ಅಂದರೆ ಒಂದು ಲಕ್ಷಕ್ಕೂ ಹೆಚ್ಚು ಜನ ಭಕ್ತರು ಇಂದು ಕೃಷ್ಣಮಠದ ಕಾರ್ಯಕ್ರಮದಲ್ಲಿ ಭಗವದ್ಗೀತೆ ಪಠಿಸಲಿದ್ದಾರೆ.
ಇದೇ ಐತಿಹಾಸಿಕ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಸಾಕ್ಷಿ ಆಗಲಿದ್ದಾರೆ. ಸ್ವತಃ ಮೋದಿಯೇ ಭಗವದ್ಗೀತೆಯ 15 ನೇ ಅಧ್ಯಾಯದ ಶ್ಲೋಕಗಳನ್ನು ಪಠಿಸಲಿದ್ದಾರೆ. ಗೀತೆಯಲ್ಲಿ ಹೆಚ್ಚಿನ ಮಹತ್ವ ಹೊಂದಿರುವ 15 ನೇ ಅಧ್ಯಾಯದ ಕೊನೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಇದಕ್ಕೆ ಬೇಕಾದ ಸಿದ್ಧತೆ ಅಂತಿಮವಾಗಿದೆ. ಇನ್ನು ಇದೇ ವೇಳೆ ಅನಂತ ಪದ್ಮನಾಭ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಮೋದಿ ಉದ್ಘಾಟಿಸಲಿದ್ದಾರೆ. ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50ನೇ ವರ್ಷ ಪೂರ್ಣಗೊಂಡ ಹಿನ್ನೆಲೆ 2 ಕೋಟಿ ರೂ. ವೆಚ್ಚದಲ್ಲಿ ತೀರ್ಥ ಮಂಟಪಕ್ಕೆ ಸ್ವರ್ಣ ಲೇಪನ ಮಾಡಲಾಗಿದ್ದು, ಇದು ಇವತ್ತು ಉದ್ಘಾಟನೆಯಾಗಲಿದೆ. ನಂತರ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದರ್ಶನ ಮಾಡಲಿದ್ದಾರೆ.
ಕಾರವಾರ ಸಮೀಪವಿರುವ ಗೋವಾ ರಾಜ್ಯಕ್ಕೆ ಸೇರಿದ ಕಾಣಕೋಣ ಬಳಿ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಆವರಣದಲ್ಲಿ ನಿರ್ಮಿಸಿರುವ 77 ಅಡಿ ಎತ್ತರದ ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 3.45ಕ್ಕೆ ಅನಾವರಣ ಮಾಡುವರು.
ಬಂದೋಬಸ್ತ್ಗೆ 3000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. 10 ಮಂದಿ ಎಸ್ಪಿ, 27 DySPಗಳು, 49 ಇನ್ಸ್ಪೆಕ್ಟರ್ಗಳು, 127 PSI, 232 ASI, 1608 ಪಿಸಿಗಳು, 39 ಮಹಿಳಾ ಸಿಬ್ಬಂದಿ, 6 KSRP ತುಕಡಿ, 6 ಕ್ಯೂಆರ್ಟಿ ತಂಡಗಳನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಮಾರ್ಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರೋಡ್ ಶೋ ಮಾರ್ಗದುದ್ದಕ್ಕೂ ಪೊಲೀಸರಿಂದ ನಿರಂತರ ತಪಾಸಣೆ ನಡೆಸಲಾಗಿದೆ.