Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಶುಕ್ರವಾರ ಸಂಜೆ 7:40 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿದ್ದ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪ್ರವಾಸವನ್ನು ದಿಢೀರ್ ಮುಂದೂಡಿದ್ದಾರೆ.
ಈಗಾಗಲೇ ಡಿಕೆ ಶಿವಕುಮಾರ್ ಸಹೋದರ ಮಾಜಿ ಸಂಸದ ಡಿಕೆ ಸುರೇಶ್ ದೆಹಲಿಯಲ್ಲಿದ್ದು, ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ.
ಎರಡೆರಡು ಬಾರಿ ಡಿಕೆ ಶಿವಕುಮಾರ್ ದೆಹಲಿ ವಿಮಾನದ ಟಿಕೆಟ್ ಬುಕ್ ಮಾಡಿದ್ದರು.
ದೆಹಲಿ ಹೈಕಮಾಂಡ್ ಕರೆದರೆ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿಕೊಂಡು ದೆಹಲಿಗೆ ತೆರಳುತ್ತೇವೆ ಎಂದು ಗುರುವಾರ ಹೇಳಿಕೆ ನೀಡಿದ್ದರು. ಆದರೆ ಶುಕ್ರವಾರ ಎರಡೆರಡು ಬಾರಿ ಡಿಕೆ ಶಿವಕುಮಾರ್ ಟಿಕೆಟ್ ಬುಕ್ ಮಾಡಿದ್ದರು. ಆದರೆ ದಿಡೀರ್ ಎಂದು ತಮ್ಮ ದೆಹಲಿ ಭೇಟಿಯನ್ನು ಮುಂದೂಡಿದ್ದಾರೆ.