Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಂಗಾಳ ಕೊಲ್ಲಿಯಲ್ಲಿ ಹುಟ್ಟಿದ ದಿತ್ವಾ ಚಂಡಮಾರುತವು ಶ್ರೀಲಂಕವನ್ನು ಸಂಪೂರ್ಣ ಬುಡಮೇಲು ಮಾಡಿದೆ. ಈ ದೈತ್ಯ ಬಿರುಗಾಳಿಯಿಂದ 132 ಜನರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದ್ದು, 176 ಜನರು ಕಾಣೆಯಾಗಿದ್ದಾರೆ.
ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮನೆಗಳು ನಾಶವಾದ ನಂತರ ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮಹಾನಿರ್ದೇಶಕ ಸಂಪತ್ ಕೊಟುವೆಗೊಡ ಹೇಳಿದ್ದಾರೆ.
ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ರಾಷ್ಟ್ರವ್ಯಾಪಿ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.ನವೆಂಬರ್ 29 ಸಂಜೆಯವರೆಗಿನ ಅಧಿಕೃತ ಅಂಕಿಅಂಶಗಳ ಪ್ರಕಾರ 132 ಜನರು ಮೃತಪಟ್ಟಿದ್ದು, ಭೂಕುಸಿತ ಮತ್ತು ಭಾರೀ ಮಳೆಯಿಂದ ಸಿಲುಕಿ 176 ಜನರು ಇನ್ನೂ ಕಾಣೆಯಾಗಿದ್ದಾರೆ. ಇದರೊಂದಿಗೆ ಮುಳುಗಿರುವ ಗ್ರಾಮಗಳಿಂದ ಶವಗಳನ್ನು ಹೊರತೆಗೆಯುವ ಕೆಲಸ ಮುಂದುವರಿದಿದ್ದು, ಸಾವಿನ ಸಂಖ್ಯೆಯು ಇನ್ನಷ್ಟು ಏರಿಕೆಯಾಗುವ ಆತಂಕವಿದೆ.