Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಿಗ್ಬಾಸ್ ಕನ್ನಡ ಶೋಗೆ ಈ ವಾರ ಐವರು ಅತಿಥಿಗಳು ಬಂದಿದ್ದರು. ಮನೆಗೆ ಬಂದ ಅತಿಥಿಗಳನ್ನು ಸ್ಪರ್ಧಿಗಳು ಚೆನ್ನಾಗಿ ನೋಡಿಕೊಂಡರು. ಉಗ್ರಂ ಮಂಜು ಅವರ ಬ್ಯಾಚುಲರ್ ಪಾರ್ಟಿ ನೆಪದಲ್ಲಿ ತ್ರಿವಿಕ್ರಂ, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ರಜತ್ ಕಿಶನ್ ಮನೆಗೆ ಆಗಮಿಸಿದ್ದರು. ಅತಿಥಿಗಳ ಆಗಮನ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆಯಲ್ಲಿ ಪ್ಯಾಲೆಸ್ ಆಗಿ ಪರಿವರ್ತನೆ ಮಾಡಲಾಗಿತ್ತು.ಶನಿವಾರ ಅತಿಥಿಗಳು ಮತ್ತು ಸ್ಪರ್ಧಿಗಳು ಎಲ್ಲರೂ ಸುದೀಪ್ ಮುಂದೆ ವಿಚಾರಣೆ ಎದುರಿಸಿದರು. ಈ ವೇಳೆ ಸುದೀಪ್ ಅವರು ಒಂದೊಳ್ಳೆ ಟ್ವಿಸ್ಟ್ ನೀಡಿದರು.
ಮದುವೆ ನಿಶ್ಚಯವಾಗಿರುವ ಉಗ್ರಂ ಮಂಜು ಅವರನ್ನು ಮನೆಯಿಂದ ನಿರ್ಗಮಿಸುವಂತೆ ಹೇಳಿದರು. ಅವರು ಅತಿಥಿಯಾಗಿ ಬಿಗ್ಬಾಸ್ ಮನೆಗೆ ಬಂದಿದ್ದಕ್ಕೆ ಧನ್ಯವಾದ ಹೇಳಿದರು. ಬಳಿಕ ಮಂಜಣ್ಣನ ಮುದ್ದಿನ ತಂಗಿ ಮೋಕ್ಷಿತಾ ಅವರಿಗೂ ಸಹ ವಿದಾಯ ಹೇಳಿದರು. ಅದಾದ ಬಳಿಕ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ಬ್ಯುಸಿ ಆಗಿರುವ ತ್ರಿವಿಕ್ರಮ್ ಅವರಿಗೂ ಸಹ ವಿದಾಯ ಹೇಳಿದರು. ರಜತ್ ಹಾಗೂ ಚೈತ್ರಾ ಕುಂದಾಪುರ ಅವರು ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳಾಗಿ ಮುಂದುವರೆಯಲಿದ್ದಾರೆ ಎಂದರು.
ಚೈತ್ರಾ ಕುಂದಾಪುರ ಹಾಗೂ ರಜತ್ ಅವರುಗಳು ವೈಲ್ಡ್ ಎಂಟ್ರಿ ಆಗಿ ಬಿಗ್ಬಾಸ್ ಮನೆಗೆ ಹೋಗಿದ್ದಾರೆ. ಈ ಹಿಂದೆ ಸೂರಜ್, ರಘು ಮತ್ತು ರಿಶಾ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಬಂದಿದ್ದರು. ಅವರಲ್ಲಿ ರಿಶಾ ಈಗಾಗಲೇ ಮನೆಗೆ ಹೋಗಿದ್ದಾರೆ. ಈಗ ರಜತ್ ಮತ್ತು ಚೈತ್ರಾ ಕುಂದಾಪುರ ಅವರು ಬಂದಿದ್ದಾರೆ.