Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನೆಲಮಂಗಲ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಆ*ತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ.
ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ 31 ವರ್ಷದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಆಕೆಯ ಇಬ್ಬರು ಮಕ್ಕಳಿಗ ಅಕ್ಷರಶಃ ಅನಾಥರಾಗಿದ್ದಾರೆ. ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಈ ಹಿನ್ನೆಲೆ ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ಮನೆ ಬಾಡಿಗೆ ಪಡೆದುಕೊಂಡು ವಾಸವಾಗಿದ್ದರು. ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿಯೇ ಅವರು ವಾಸವಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.