Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
19 ವರ್ಷದ ಯುವಕ ಇನ್ನೆರಡು ವರ್ಷ ಮದುವೆ ಆಗಲು ಕಾಯಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಮದುವೆಯನ್ನು ಮುಂದೂಡುವಂತೆ ಕುಟುಂಬಸ್ಥರು ಒತ್ತಾಯಿಸಿದ್ದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆ ನವೆಂಬರ್ 30ರಂದು ಡೊಂಬಿವ್ಲಿ ಪ್ರದೇಶದಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಯುವಕ ತನ್ನ ಊರಿನ ಹುಡುಗಿಯನ್ನು ಪ್ರೀತಿಸುತ್ತಿದ್ದ ಮತ್ತು ಅವಳನ್ನು ಮದುವೆಯಾಗಲು ಬಯಸಿದ್ದ. ಆದರೆ ಆತನ ಕುಟುಂಬವು ಮದುವೆಗೆ ಕಾನೂನುಬದ್ಧವಾಗಿ ಅನುಮತಿಸಲಾದ 21 ವರ್ಷವನ್ನು ತಲುಪುವವರೆಗೆ ಕಾಯುವಂತೆ ಕೇಳಿಕೊಂಡಿತ್ತು. ಇದು ಅವನಿಗೆ ಭಾವನಾತ್ಮಕ ಯಾತನೆಯನ್ನು ಉಂಟು ಮಾಡಿತ್ತು ಎಂದು ಮನ್ಪಾಡಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 30ರಂದು ಈ ಯುವಕ ತನ್ನ ಮನೆಯ ಛಾವಣಿಗೆ ಸ್ಕಾರ್ಫ್ ಕಟ್ಟಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ನೇಣು ಬಿಗಿದಿದ್ದನ್ನು ನೋಡಿದ ಕೂಡಲೇ ಕುಟುಂಬಸ್ಥರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಯುವಕ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು. ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಏರ್ಪೋರ್ಟ್ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ;ಡಿಸೆಂಬರ್ 8 ರಿಂದ ಜಾರಿ