Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ : ಗೋವಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಟನೆಯನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಅಪಹಾಸ್ಯ ಮಾಡಿದ್ದರು. ತುಳುನಾಡಿನ ದೈವಕ್ಕೆ ರಣವೀರ್ ಸಿಂಗ್ ಅಪಮಾನ ಮಾಡಿದ್ದಾರೆಂದು ಸೋಷಿಯಲ್ ಮೀಡಿಯಾ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಇದರ ಬೆನ್ನಲೇ ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ರಣವೀರ್ ಇನ್ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. `ಕಾಂತಾರ ಚಾಪ್ಟರ್ 1′ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ನಾನೊಬ್ಬ ನಟನಾಗಿ ಆ ನಿರ್ದಿಷ್ಟ ದೃಶ್ಯದಲ್ಲಿ ನಟಿಸುವುದು ಎಷ್ಟು ಸವಾಲಾಗಿರುತ್ತದೆ ಎನ್ನೋದು ನನಗೆ ಚೆನ್ನಾಗಿ ಗೊತ್ತು. ಅವರ ನಟನೆಗೆ ಅಪಾರ ಮೆಚ್ಚುಗೆಯಿದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಹಾಗೂ ನಂಬಿಕೆಯನ್ನು ನಾನು ಗೌರವಿಸುತ್ತೇನೆ. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ. ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.