Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka politics ಮಂಗಳೂರು ಏರ್‌ಪೋರ್ಟ್‌ನಲ್ಲಿ ಡಿಕೆ-ಸಿದ್ದು ಬಣಗಳಿಂದ ಶಕ್ತಿ ಪ್ರದರ್ಶನ, ವೇಣುಗೋಪಾಲ್ ತಬ್ಬಿಬ್ಬು
ಕರ್ನಾಟಕದೇಶಪ್ರಮುಖ

Karnataka politics ಮಂಗಳೂರು ಏರ್‌ಪೋರ್ಟ್‌ನಲ್ಲಿ ಡಿಕೆ-ಸಿದ್ದು ಬಣಗಳಿಂದ ಶಕ್ತಿ ಪ್ರದರ್ಶನ, ವೇಣುಗೋಪಾಲ್ ತಬ್ಬಿಬ್ಬು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು: ಇಲ್ಲಿನ ಏರ್ಪೋರ್ಟ್‌ನಲ್ಲಿ ಡಿಕೆ ಬಣ ಹಾಗೂ ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನ ಕಂಡು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಬ್ಬಿಬ್ಬಗೊಂಡ ಪ್ರಸಂಗ ನಡೆಯಿತು.

ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ಭಾಗಿಯಾಗಲು ವೇಣುಗೋಪಾಲ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಒಳರಾಜಕಾರಣ ಮತ್ತೊಮ್ಮೆ ಬಹಿರಂಗವಾಯಿತು.
ದೆಹಲಿಯಿಂದ ನೇರವಾಗಿ ಮಂಗಳೂರಿಗೆ ಬಂದ ವೇಣುಗೋಪಾಲ್ ಅವರನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು.

ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ, ಡಿ.ಕೆ.ಶಿವಕುಮಾರ್ ಪರ ಘೋಷಣೆಗಳೊಂದಿಗೆ ಕಾರ್ಯಕರ್ತರು ಭಾರೀ ಜಮಾವಣೆಗೊಂಡು ಬಣಶಕ್ತಿ ಪ್ರದರ್ಶನ ಮಾಡಿದರು.

ಡಿ.ಕೆ.ಶಿವಕುಮಾರ್ ಆಪ್ತ ಮಿಥುನ್ ರೈ ಹಾಗೂ ಅವರ ಬೆಂಬಲಿಗರ ನೇತೃತ್ವದಲ್ಲಿ ಡಿ.ಕೆ… ಡಿ.ಕೆ… ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ವೇಣುಗೋಪಾಲ್ ಎದುರಲ್ಲೇ ತಮ್ಮ ಶಕ್ತಿಯನ್ನು ತೋರಿಸಿದರು.

ಅಚಾನಕ್ ಆಗಿ ದೊಡ್ಡ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರ ನೂಕಾಟ-ತಳ್ಳಾಟದಿಂದ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ವೇಣುಗೋಪಾಲ್ ತಮ್ಮ ವಾಹನಕ್ಕೆ ತಲುಪಲು ಹರಸಾಹಸಪಡಬೇಕಾಯಿತು.

ಇದಕ್ಕೆ ವೇಣುಗೋಪಾಲ್ ಯಾವುದೇ ಪ್ರತಿಕ್ರಿಯೆ ನೀಡದೆ, ಕೊಣಾಜೆಯಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡ್ತೀನಿ ಎಂದಷ್ಟೇ ಹೇಳಿದರು.

ಕೆಲವೇ ಗಂಟೆಗಳ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದರು. ಅವರೊಂದಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ನಾಯಕರು ಆಗಮಿಸಿದರು. ಸಿದ್ದರಾಮಯ್ಯ ವಿಮಾನ ನಿಲ್ದಾಣದ ಹೊರಬಂದು ವಾಹನದತ್ತ ತೆರಳುತ್ತಿದ್ದಂತೆಯೇ, ಎಂಎಲ್‌ಸಿ ಐವನ್ ಡಿಸೋಜಾ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯ ಕಾರ್ಯಕರ್ತರು ಸಿದ್ದು… ಸಿದ್ದು… ಪೂರ್ಣಾವಧಿ ಸಿದ್ದು! ಎಂದು ಘೋಷಣೆ ಕೂಗಿ ಸಿದ್ದರಾಮಯ್ಯ ಪರ ಬಣದ ಶಕ್ತಿ ಪ್ರದರ್ಶನ ಮಾಡಿದರು.

ಮದುವೆಯಾಗಿ 24 ಗಂಟೆಯೊಳಗೆ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ ಪತಿ -ಕಾರಣವೇನು?

TAGGED:DK-Siddu factions show strength at Mangalore airportVenugopal confused
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ 03-12-2025, ಬುಧವಾರ, ಉದ್ಯೋಗಿಗಳಿಗೆ ಕಷ್ಟದ ಸಮಯ
Next Article ಇನ್ಮುಂದೆ ಸರ್ಕಾರಿ ಶಾಲೆಗಳ ಎಲ್ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಸಿಗಲಿದೆ ಮೊಟ್ಟೆ, ಹಾಲು, ಬಾಳೆಹಣ್ಣು

Popular Posts

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read

You Might Also Like

ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read
ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

1 Min Read
ಪ್ರಮುಖಆರೋಗ್ಯ

Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ

2 Min Read
ಪ್ರಮುಖSportsದೇಶ

Xbox ವಿಶ್ವದಾದ್ಯಂತ ಕೈಕೊಟ್ಟ ಎಕ್ಸ್‌ಬಾಕ್ಸ್ ಸರ್ವರ್; ಆನ್‌ಲೈನ್ ಗೇಮ್‌ಗಳನ್ನು ಆಡಲಾಗದೆ ಗೇಮರ್‌ಗಳ ಪರದಾಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?