Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಂಗಳೂರು: ಇಲ್ಲಿನ ಏರ್ಪೋರ್ಟ್ನಲ್ಲಿ ಡಿಕೆ ಬಣ ಹಾಗೂ ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನ ಕಂಡು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಬ್ಬಿಬ್ಬಗೊಂಡ ಪ್ರಸಂಗ ನಡೆಯಿತು.
ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ಭಾಗಿಯಾಗಲು ವೇಣುಗೋಪಾಲ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾಂಗ್ರೆಸ್ ಒಳರಾಜಕಾರಣ ಮತ್ತೊಮ್ಮೆ ಬಹಿರಂಗವಾಯಿತು.
ದೆಹಲಿಯಿಂದ ನೇರವಾಗಿ ಮಂಗಳೂರಿಗೆ ಬಂದ ವೇಣುಗೋಪಾಲ್ ಅವರನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ, ಡಿ.ಕೆ.ಶಿವಕುಮಾರ್ ಪರ ಘೋಷಣೆಗಳೊಂದಿಗೆ ಕಾರ್ಯಕರ್ತರು ಭಾರೀ ಜಮಾವಣೆಗೊಂಡು ಬಣಶಕ್ತಿ ಪ್ರದರ್ಶನ ಮಾಡಿದರು.
ಡಿ.ಕೆ.ಶಿವಕುಮಾರ್ ಆಪ್ತ ಮಿಥುನ್ ರೈ ಹಾಗೂ ಅವರ ಬೆಂಬಲಿಗರ ನೇತೃತ್ವದಲ್ಲಿ ಡಿ.ಕೆ… ಡಿ.ಕೆ… ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ವೇಣುಗೋಪಾಲ್ ಎದುರಲ್ಲೇ ತಮ್ಮ ಶಕ್ತಿಯನ್ನು ತೋರಿಸಿದರು.
ಅಚಾನಕ್ ಆಗಿ ದೊಡ್ಡ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರ ನೂಕಾಟ-ತಳ್ಳಾಟದಿಂದ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ವೇಣುಗೋಪಾಲ್ ತಮ್ಮ ವಾಹನಕ್ಕೆ ತಲುಪಲು ಹರಸಾಹಸಪಡಬೇಕಾಯಿತು.
ಇದಕ್ಕೆ ವೇಣುಗೋಪಾಲ್ ಯಾವುದೇ ಪ್ರತಿಕ್ರಿಯೆ ನೀಡದೆ, ಕೊಣಾಜೆಯಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡ್ತೀನಿ ಎಂದಷ್ಟೇ ಹೇಳಿದರು.
ಕೆಲವೇ ಗಂಟೆಗಳ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದರು. ಅವರೊಂದಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಲವು ನಾಯಕರು ಆಗಮಿಸಿದರು. ಸಿದ್ದರಾಮಯ್ಯ ವಿಮಾನ ನಿಲ್ದಾಣದ ಹೊರಬಂದು ವಾಹನದತ್ತ ತೆರಳುತ್ತಿದ್ದಂತೆಯೇ, ಎಂಎಲ್ಸಿ ಐವನ್ ಡಿಸೋಜಾ ನೇತೃತ್ವದಲ್ಲಿ ದೊಡ್ಡ ಸಂಖ್ಯೆಯ ಕಾರ್ಯಕರ್ತರು ಸಿದ್ದು… ಸಿದ್ದು… ಪೂರ್ಣಾವಧಿ ಸಿದ್ದು! ಎಂದು ಘೋಷಣೆ ಕೂಗಿ ಸಿದ್ದರಾಮಯ್ಯ ಪರ ಬಣದ ಶಕ್ತಿ ಪ್ರದರ್ಶನ ಮಾಡಿದರು.
ಮದುವೆಯಾಗಿ 24 ಗಂಟೆಯೊಳಗೆ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ ಪತಿ -ಕಾರಣವೇನು?