Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka politics ಹೈಕಮಾಂಡ್‌ಗೆ ವರದಿ ನೀಡಿದ ಡಿಕೆಶಿ: ಸಿಎಂ ಆಪ್ತ ಸಚಿವ, ಶಾಸಕರಿಗೆ ನಡುಕ, ವರದಿಯಲ್ಲೇನಿದೆ?
ಕರ್ನಾಟಕದೇಶಪ್ರಮುಖ

Karnataka politics ಹೈಕಮಾಂಡ್‌ಗೆ ವರದಿ ನೀಡಿದ ಡಿಕೆಶಿ: ಸಿಎಂ ಆಪ್ತ ಸಚಿವ, ಶಾಸಕರಿಗೆ ನಡುಕ, ವರದಿಯಲ್ಲೇನಿದೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಇತ್ತೀಚಿನ ರಾಜಕೀಯ ಬೆಳವಣಿಗೆಗಳಲ್ಲಿ ಸಿದ್ದರಾಮಯ್ಯ ಅವರ ಗುಂಪಿನಲ್ಲಿ ಕಾಣಿಸಿಕೊಂಡು, ತಮಗೆ ಎದುರಾಗಿ ನಿಂತಿರುವ ಸಚಿವರ ಮತ್ತು ಶಾಸಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌‍ ಹೈಕಮಾಂಡ್‌ಗೆ ವರದಿ ನೀಡಿದ್ದಾರೆ.

ಬುಧವಾರ(ಡಿ.3) ದೆಹಲಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್‌ ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ಅದರಲ್ಲೂ ಸಂಘಟನಾತ್ಮಕ ಚಟುವಟಿಕೆಗಳ ಉಸ್ತುವಾರಿ ನೋಡಿಕೊಳ್ಳುವ ಮತ್ತು ಅದರ ಬಗ್ಗೆ ಕಾಲಕಾಲಕ್ಕೆ ವರದಿ ಪಡೆಯುವ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರನ್ನೇ ಭೇಟಿ ಮಾಡಿ ವರದಿ ನೀಡಿದ್ದಾರೆ.

ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಹಕರಿಸದ ಶಾಸಕರು ಮತ್ತು ಸಚಿವರ ಪಟ್ಟಿಯನ್ನು ಹೈಕಮಾಂಡ್‌ ಗೆ ಸಲ್ಲಿಸಿದ್ದು, ಇವರು ಪಕ್ಷದಿಂದ ಲಾಭ ಪಡೆದಿದ್ದಾರೆ. ಆದರೆ ಪಕ್ಷಕ್ಕೆ ಅವರ ಕೊಡುಗೆ ನಿರಾಶಾದಾಯಕ ಎಂದು ಆಕ್ಷೇಪಿಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಮತಗಳ್ಳತನದ ವಿರುದ್ಧ ಪ್ರತಿಭಟನೆ ನಡೆಸಿದಾಗ, ಸದಸ್ಯತ್ವ ನೋಂದಣಿ ಸೇರಿದಂತೆ ಕಾಂಗ್ರೆಸ್‌‍ ವತಿಯಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಅದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಬೆಂಬಲಿಸಬೇಕು ಎಂದು ವರಿಷ್ಠ ನಾಯಕರು ಪಕ್ಷದ ಶಾಸಕರು ಮತ್ತು ಸಚಿವರಿಗೆ ಸೂಚನೆ ನೀಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಬಹಳಷ್ಟು ಶಾಸಕರು ಮತ್ತು ಸಚಿವರು ಪಕ್ಷದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳದೆ ಅನಾದರಣೆ ತೋರಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಇಂತಹ ಉಡಾಫೆಯ ಶಾಸಕರು ಹಾಗೂ ಸಚಿವರಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೂ ಅದನ್ನು ಲೆಕ್ಕಿಸದೆ ಶಾಸಕರು, ಸಚಿವರು ತಮ್ಮ ಧೋರಣೆಯನ್ನು ಮುಂದುವರಿಸಿದ್ದಾರೆ. ಮುಂದಿನ ಸಚಿವ ಸಂಪುಟ ಪುನರ್‌ ರಚನೆಯ ವೇಳೆಯಲ್ಲಿ ಅಂತಹವರನ್ನು ಕೈಬಿಡಬೇಕು. ಶಾಸಕರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಮನವಿ ಮಾಡಿರುವುದಾಗಿ ತಿಳಿದುಬಂದಿದೆ.

ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಪಟ್ಟಿ ಸಂಪುಟದಲ್ಲಿನ ಬಹಳಷ್ಟು ಸಚಿವರಿಗೆ ನಡುಕ ಹುಟ್ಟಿಸಿದೆ. ಸಚಿವ ಸಂಪುಟ ವಿಸ್ತರಣೆಯಾಗಲೇಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರೆ, ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಪಟ್ಟಿ ಬ್ರಹಾಸ್ತ್ರವಾಗಲಿದೆ. ಸುಮಾರು 20ಕ್ಕೂ ಹೆಚ್ಚು ಸಚಿವರನ್ನು ವಜಾಗೊಳಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಲಾಗಿದೆ.

ಡಿ.ಕೆ.ಶಿವಕುಮಾರ್‌ ಸಲ್ಲಿಸಿರುವ ಪಟ್ಟಿಯಲ್ಲಿ ಪ್ರಭಾವಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಸಚಿವರ ಹೆಸರುಗಳಿವೆ ಎನ್ನಲಾಗುತ್ತಿದೆ.

ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸ ಮಹತ್ವದ ಬೆಳವಣಿಗೆ ಎನ್ನಲಾಗುತ್ತಿದೆ. ಪಕ್ಷ ಹಾಗೂ ಸರ್ಕಾರದ ಜವಾಬ್ದಾರಿಗಳನ್ನು ನಿಭಾಯಿಸುವ ಬದಲಿಗೆ ಪರ-ವಿರೋಧ ಚರ್ಚೆ ಮಾಡುತ್ತಾ ರಾಜಕೀಯ ಗೊಂದಲಗಳನ್ನು ಮೂಡಿಸುತ್ತಿದ್ದ ಸಚಿವರಿಗೆ ಮತ್ತು ಶಾಸಕರಿಗೆ ಈ ಮೂಲಕ ಡಿ.ಕೆ.ಶಿವಕುಮಾರ್‌ ಟಾಂಗ್‌ ನೀಡಲಾರಂಭಿಸಿದ್ದಾರೆ.

ಅಭಿಮಾನಿಗಳ ಮುಂದೆ ಶಾರುಖ್‌ ಖಾನ್‌ ಪುತ್ರನಿಂದ ಅಸಭ್ಯ ವರ್ತನೆ

ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ

ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ

TAGGED:DK reports to high command: CM's close ministerMLAs are nervouswhat's in the report?
Share This Article
Facebook Twitter Copy Link Print
Previous Article ಅಭಿಮಾನಿಗಳ ಮುಂದೆ ಶಾರುಖ್‌ ಖಾನ್‌ ಪುತ್ರನಿಂದ ಅಸಭ್ಯ ವರ್ತನೆ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ 05-12-2025,‌ ಶುಕ್ರವಾರ

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?