Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಆಪರೇಷನ್ ಮಾಡುವಾಗ ವೈದ್ಯರ ಮೈಯೆಲ್ಲಾ ಕಣ್ಣಾಗಿರಬೇಕು. ಏಕೆಂದರೆ ಕೊಂಚ ಹೆಚ್ಚು-ಕಡಿಮೆಯಾದರೂ ರೋಗಿಯ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಇರುತ್ತದೆ. ಎಷ್ಟೋ ಮಂದಿ ವೈದ್ಯರನ್ನು ಪ್ರಾಣ ಉಳಿಸುವ ದೇವರೆಂದು ಕರೆಯುತ್ತಾರೆ. ಆದರೆ ಅಂತಹ ವೈದ್ಯರೇ ಒಮ್ಮೆ ಮೈ ಮೇಲೆ ಪ್ರಜ್ಞೆಯಿಲ್ಲದಂತೆ ವರ್ತಿಸಿದರೆ, ರೋಗಿಗಳು ಜೀವವನ್ನೆ ಕಳೆದುಕೊಳ್ಳಬೇಕಾಗಿರುತ್ತದೆ. ಇಲ್ಲ ಜೀವನ ಪೂರ್ತಿ ನರಳಾಡ ಬೇಕಾಗಿರುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಕಾಲಿನಲ್ಲಿ ಒಂದುವರೆ ವರ್ಷಗಳ ಹಿಂದೆ ನಡೆಸಿದ ಶಸ್ತ್ರಚಿಕಿತ್ಸೆ ವೇಳೆ ಶಸ್ತ್ರಚಿಕಿತ್ಸಾ ಉಪಕರಣ ಮರೆತುಬಿಟ್ಟಿದ್ದಾರೆ.
ಆಂಧ್ರದ ಕಾಕಿನಾಡ ಜಿಲ್ಲೆಯ ಟುನಿ ಮಂಡಲದ ಎಸ್. ಅನ್ನಾವರಂ ಪಂಚಾಯತ್ನ ರಾಮಕೃಷ್ಣ ನಗರದ ಚಿನ್ನ (25) ಎಂಬ ಯುವಕನಿಗೆ ಒಂದೂವರೆ ವರ್ಷದ ಹಿಂದೆ ವೈಜಾಗ್ನಲ್ಲಿ ಕಾಲಿಗೆ ಆದ ಗಾಯಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ಸಮಯದಲ್ಲಿ, ಅವರ ಕಾಲಿಗೆ ತೀವ್ರ ಗಾಯಗಳಾಗಿತ್ತು. ಕಾಲಿನ ಒಳಗೆ ರಾಡ್ ಸೇರಿಸಿ, ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದನ್ನು ಮಾಡಿಸಿ ಒಂದು ವರ್ಷದ ನಂತರ ಮತ್ತೆ ನೋವು ಶುರುವಾಗಿತ್ತು. ವೈದ್ಯರು ಕಾಲಿಗೆ ಹಾಕಿರುವ ಬೋಲ್ಟ್ ತೆಗೆದರೆ ಅದು ಬೇಗನೆ ಸರಿಯಾಗುತ್ತದೆ ಎಂದು ಹೇಳಿದ್ದರು.
ಬೋಲ್ಟ್ ತೆಗೆಯಲು ಟುನಿ ಸರ್ಕಾರಿ ಆಸ್ಪತ್ರೆ ವೈದ್ಯರು ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ, ಅವರಿಗೆ ಮತ್ತೊಂದು ಅಚ್ಚರಿಯ ವಸ್ತುವೊಂದು ಕಾಲಿನಲ್ಲಿ ಕಂಡಿದೆ. ಒಂದು ವರ್ಷದ ಹಿಂದೆ ಮಾಡಿದ ಶಸ್ತ್ರಚಿಕಿತ್ಸೆ ವೇಳೆ, ವೈದ್ಯರು ಶಸ್ತ್ರಚಿಕಿತ್ಸಾ ಬ್ಲೇಡ್ನ್ನು ಕಾಲಿನ ಒಳಗೆಯೇ ಬಿಟ್ಟಿದ್ದಾರೆ. ಇದೀಗ ಅದನ್ನು ತೆಗೆದು ಮತ್ತೆ ಹೊಲಿಗೆ ಹಾಕಿದ್ದಾರೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಎಷ್ಟು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂಬುದು ಕಾಣುತ್ತಿದೆ ಎಂದು ರೋಗಿಯ ಮನೆಯವರು ಹೇಳಿದ್ದಾರೆ. ಇನ್ನು ವಿಚಾರ ತಿಳಿದು ರೋಗಿ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವೈದ್ಯರು ಬಳಿ ಕೇಳಿದಾಗ, ವೈದ್ಯರು ರೋಗಿಯ ವಿರುದ್ಧವೇ ಮಾತನಾಡಿದ್ದಾರೆ.