Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು RSS ವಿರುದ್ಧ ಬಿಜೆಪಿ ಶಾಸಕ ಸುರೇಶ್ ಗೌಡ ಮಾಡಿರುವ ಗಂಭೀರ ಆರೋಪಗಳ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿ ಬುಧವಾರ ಗೃಹ ಸಚಿವ ಪರಮೇಶ್ವರ್ ಅವರಿಗೆ ಪತ್ರ ಬರೆದಿದ್ದು, ಈ ಆರೋಪಗಳ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದೆ.
ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಅಧ್ಯಕ್ಷ ಎಚ್. ಜಿ. ರಮೇಶ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದು, ಸುರೇಶ್ ಗೌಡ ಅವರು ಮಾಡಿರುವ ಆರೋಪ ಕುರಿತು ಪ್ರಸ್ತಾಪಿಸಿದ್ದಾರೆ.
ಪತ್ರದಲ್ಲಿ ಯಡಿಯೂರಪ್ಪ ಒಂದು ಮಾಧ್ಯಮ ಸಂಸ್ಥೆಗೆ 5 ಕೋಟಿ ರೂ. ಪಾವತಿಸಿದ್ದಾರೆ. ಭೂ ಸಂಬಂಧಿತ ವಿಷಯಗಳಲ್ಲಿ ಮತ್ತೊಂದು ಮಾಧ್ಯಮ ಸಂಸ್ಥೆಗೆ ಅಕ್ರಮವಾಗಿ ಹಣದ ನೆರವು ನೀಡಿದ್ದಾರೆಂದು ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಆರ್ಎಸ್ಎಸ್ಗೆ ವಿವಿಧ ಕಾನೂನುಬಾಹಿರ ಅನುಕೂಲಗಳನ್ನು ನೀಡಿದೆ ಎಂದು ಆರೋಪಿಸಲಾಗಿದೆ.