Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನಾಸಿಕ್: ಪೂಜ್ಯ ಸಪ್ತಶೃಂಗಿ ದೇವಿ ದೇವಸ್ಥಾನಕ್ಕೆ ತೀರ್ಥಯಾತ್ರೆಯಿಂದ ಹಿಂತಿರುಗುತ್ತಿದ್ದಾಗ ಕಾರೊಂದು ಕಂದಕಕ್ಕೆ ಉರುಳಿಬಿದ್ದು, ಆರು ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನ ವಾನಿಯಲ್ಲಿರುವ ಗಣೇಶ್ ಪಾಯಿಂಟ್ ಬಳಿ ನಡೆದಿದೆ.
ಕಠಿಣ ಪರ್ವತ ರಸ್ತೆಯಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಅಪಘಾತದ ವರದಿಗಳ ನಂತರ ಸ್ಥಳೀಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಮೃತರನ್ನು ಹೊರತೆಗೆಯಲು ಸಾಕಷ್ಟು ಕಷ್ಟ ಪಡಬೇಕಾಯಿತು.ಮತ್ತೊಂದು ಘಟನೆಯಲ್ಲಿ, ಮಹಾರಾಷ್ಟ್ರದ ಲೋನಾವಾಲ ಗಿರಿಧಾಮದ ಲಯನ್ಸ್ ಪಾಯಿಂಟ್ ಬಳಿ ಕಾರು ಮತ್ತು ಮಿನಿ ಟ್ರಕ್ ನಡುವೆ ಸಂಭವಿಸಿದ ದುರಂತ ಡಿಕ್ಕಿಯಲ್ಲಿ ಗೋವಾದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದರು.