Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಪ್ರಿ ವೆಡ್ಡಿಂಗ್ ಶೂಟಿಂಗ್ ಬಳಿಕ ದುರಂತ ಅಂತ್ಯ ಕಂಡ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.ಮದುವೆಗೆ ಕೆಲ ದಿನಗಳು ಮಾತ್ರ ಬಾಕಿ ಇತ್ತು. ಮದುವೆಗೂ ಮುನ್ನ ಸಾಮಾನ್ಯವಾಗಿರುವ ಪ್ರೀ ವೆಡ್ಡಿಂಗ್ ಫೋಟೋ ಶೂಟಿಂಗ್ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿಯಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಭಾವೀ ದಂಪತಿ ಮೃತಪಟ್ಟಿದ್ದಾರೆ.ಕೊಪ್ಪಳದ ಗಂಗಾವತಿಯ ದಾಸನಾಳ ಸಮೀಪದ ಬಂಡ್ರಾಳದ ವೆಂಕಟಗಿರಿ ಕ್ರಾಸ್ ಬಳಿ ನಡೆದಿದೆ.26 ವರ್ಷದ ಕರಿಯಪ್ಪ ಮಡಿವಾಳ ಹಾಗೂ 19 ವರ್ಷದ ಕವಿತಾ ಪವಾಡೆಪ್ಪ ಪ್ರಿ ವೆಡ್ಡಿಂಗ್ ಶೂಟಿಂಗ್ ಮಾಡಲು ಹೊಸಪೇಟೆಯ ಪಂಪಾವನ ಮುನಿರಾಬಾದ್ಗೆ ತೆರಳಿದ್ದರು. ಫೋಟೋಗ್ರಾಫರ್ ಈ ಸ್ಥಳ ಸೂಚಿಸಿದ್ದರು. ಹೀಗಾಗಿ ಇಬ್ಬರು ಬೈಕ್ನಲ್ಲಿ ತೆರಳಿ ಖುಷಿ ಖುಷಿಯಿಂದ ಪ್ರಿ ವೆಡ್ಡಿಂಗ್ ಫೋಟೋ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದರು. ಫೋಟೋ ಹಾಗೂ ವಿಡಿಯೋ ಶೂಟಿಂಗ್ ಸಂಜೆವರೆಗೂ ನಡೆದಿತ್ತು. ಕತ್ತಲಾಗುತ್ತಿದ್ದಂತೆ ಶೂಟಿಂಗ್ ಮುಗಿಸಿದ ಭಾವೀ ದಂಪತಿ ಬೈಕ್ ಮೂಲಕ ಮರಳಿದ್ದಾರೆ. ಕವಿತಾ ಪವಾಡೆಪ್ಪಳನ್ನು ಆಕೆಯ ಕಾರಟಗಿ ತಾಲೂಕಿನ ಮುಷ್ಠೂರು ಗ್ರಾಮಕ್ಕೆ ಬಿಟ್ಟು, ತಾನು ಕೊಪ್ಪಳದ ಇರಕಲಗಡ ಗ್ರಾಮಕ್ಕೆ ತೆರಳಲು ಪ್ಲಾನ್ ಮಾಡಿದ್ದರು. ಇದರಂತೆ ಬೈಕ್ನಲ್ಲಿ ಸಾಗುತ್ತಿದ್ದಂತೆ ಏಕಾಏಕಿ ಬಂದ ಲಾರಿ ಡಿಕ್ಕಿಯಾಗಿದೆ.
ಡಿಸೆಂಬರ್ 21ಕ್ಕೆ ನಿಗದಿಯಾಗಿದ್ದ ಮದುವೆ:
ಕರಿಯಪ್ಪ ಮಡಿವಾಳ ಹಾಗೂ ಕವಿತಾ ಪವಾಡೆಪ್ಪ ಇಬ್ಬರ ಎಂಗೇಜ್ಮೆಂಟ್ ನವೆಂಬರ್ 21ರಂದು ನಡೆದಿತ್ತು. ಬಳಿಕ ಮದುವೆ ತಯಾರಿಗಳು ಆರಂಭಗೊಂಡಿದ್ದವು.ಕಳೆದೆರಡು ವಾರದಿಂದ ಇಬ್ಬರು ಆಪ್ತರು, ಕುಟುಂಬಸ್ಥರನ್ನು ಮದುವೆಗೆ ಆಮಂತ್ರಿಸಲು ಆರಂಭಿಸಿದ್ದರು. ಪ್ರಿ ವೆಡ್ಡಿಂಗ್ ಫೋಟೋ ಶೂಟ್ಗೆ ಸಮಯ ನಿಗದಿ ಮಾಡಿದ್ದರು. ಇದರಂತೆ ಭಾನುವಾರ ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಮರಳುವಾಗ ಅಪಘಾತ ಸಂಭವಿಸಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sexual Health ದೈಹಿಕ ಸಂಪರ್ಕ ನಂತರದ ರಕ್ತಸ್ರಾವ ನಿರ್ಲಕ್ಷಿಸದಿರಿ, ಇದು ಅಪಾಯದ ಲಕ್ಷಣವೂ ಆಗಿರಬಹುದು!