Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಳಗಾವಿ: ವಿಧಾನಮಂಡಲ ಅಧಿವೇಶನದ ಮೂರನೇ ದಿನದಂದು ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆ ಕಾವು ತೀವ್ರಗೊಂಡಿದ್ದು, ಈ ವೇಳೆ ರೈತರೊಬ್ವರು ಅಸ್ವಸ್ಥಗೊಂಡರು.
ಇದರಿಂದ ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪ್ರತಿಭಟನೆ
ನಡೆಸುತ್ತಿದ್ದ ರಾಯಬಾಗ ತಾಲೂಕಿನ ಕುಡಚಿ ಗ್ರಾಮದ ರೈತ ಯಲ್ಲಪ್ಪಾ ಹಿರೇಕುರಬರ (35) ಅಸ್ವಸ್ಥಗೊಂಡ ರೈತ.
ಬುಧವಾರ ಸುವರ್ಣಸೌಧದ ಪಕ್ಕದಲ್ಲಿರುವ ಪ್ರತಿಭಟನಾ ಸ್ಥಳದಲ್ಲಿ, ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಹೋರಾಟ ನಡೆಸುತ್ತಿರುವ ವೇಳೆ ಭಾರೀ ಒತ್ತಡ, ಜನಸಮೂಹ ಹಾಗೂ ದೀರ್ಘ ಕಾಲದಿಂದ ಕೂಗಾಟ, ಘೋಷಣೆಗಳ ನಡುವೆಯೇ ರೈತರಿಗೆ ಪಿಟ್ಸ್ (ಬಿಪಿ/ಛಕ್ಕರ ಏರಿಳಿತ ಶಂಕೆ) ಉಂಟಾಗಿರುವುದರಿಂದ ತಲೆ ಸುತ್ತಿ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ವೈದ್ಯಕೀಯ ಸಿಬ್ಬಂದಿ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಗೆ ಸೇರಿದ ಮೂಲಗಳು ತಿಳಿಸಿವೆ.
ಘಟನೆ ನಂತರ ಕೆಲ ಕ್ಷಣ ಕಾಲ ಪ್ರತಿಭಟನೆ ಸ್ಥಳದಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣಕೊಂಡಿತ್ತು, ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ರೈತರ ಮಾನಸಿಕ ಹಾಗೂ ಶಾರೀರಿಕ ಒತ್ತಡ ಹೆಚ್ಚಾಗಿರುವುದಾಗಿ ಸಂಘಟಕರು ತಿಳಿಸಿದ್ದಾರೆ.
BPL card ರಾಜ್ಯದಲ್ಲಿ ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ ಘೋಷಣೆ