Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಂಡ್ಯ : ಪುಂಡರು ಶಾಲಾ ಬಸ್ ತಡೆದ ಪುಂಡರು ಚಾಲಕನಿಗೆ ಆವಾಜ್ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಡ್ಡರಹಳ್ಳಿ ಗ್ರಾಮದ ಕಿರಣ್ ಮತ್ತು ಗಿರೀಶ್ ಎಂಬ ಯುವಕರು 9 ನೇ ತರಗತಿ ವಿದ್ಯಾರ್ಥಿನಿಗೆ ಲೈನ್ ಹೊಡೆಯುತ್ತಿರುತ್ತಾರೆ. ಬಾಲಕಿಯನ್ನ ಬಸ್ ನಿಂದ ಕೆಳಗೆ ಇಳಿಸುವಂತೆ ಆಗ್ರಹಿಸಿ ಚಾಲಕನಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.
ಪುಂಡರ ಕೃತ್ಯವನ್ನ ಚಾಲಕ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಘಟನೆಗೆ ಸಂಬಂಧಿಸಿದಂತೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಚಾಲಕ ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ. ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.