Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ಲೀಸ್ ಸರ್ ಒಮ್ಮೆ ದರ್ಶನ್ ಭೇಟಿ ಮಾಡಿಸಿ; ಪವಿತ್ರಾ ಗೌಡ ಬೇಡಿಕೊಂಡರೂ ಡಿಜಿಪಿ ನಿರಾಕರಿಸಿದ್ದೇಕೆ?
ಪ್ರಮುಖಮನರಂಜನೆ

ಪ್ಲೀಸ್ ಸರ್ ಒಮ್ಮೆ ದರ್ಶನ್ ಭೇಟಿ ಮಾಡಿಸಿ; ಪವಿತ್ರಾ ಗೌಡ ಬೇಡಿಕೊಂಡರೂ ಡಿಜಿಪಿ ನಿರಾಕರಿಸಿದ್ದೇಕೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಬೆಂಗಳೂರು : ರೇಣುಕಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಅಧಿಕೃತವಾಗಿ ಆರಂಭವಾಗುತ್ತಿದ್ದಂತೆ, ಪರಪ್ಪನ ಅಗ್ರಹಾರ ಮತ್ತು ಬಳ್ಳಾರಿ ಜೈಲಿನಲ್ಲಿರುವ ಆರೋಪಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ಈ ಪೈಕಿ ಎ-1 ಆರೋಪಿ ಪವಿತ್ರಾ ಗೌಡಗೆ ಸಂಕಷ್ಟಗಳು ಹೆಚ್ಚಾಗಿದ್ದು, ಆರ್ಥಿಕ ನೆರವಿಗಾಗಿ ನಟ ದರ್ಶನ್ ಭೇಟಿಗೆ ಅವರು ನಡೆಸುತ್ತಿರುವ ಸರ್ವ ಪ್ರಯತ್ನಗಳೂ ವಿಫಲವಾಗುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.ಹೌದು, ಗೆಳತಿ ವಿಚಾರಕ್ಕಾಗಿಯೇ ಈಗ ದರ್ಶನ್‌ ಜೈಲಿನಲ್ಲಿ ಇದ್ದಾರೆ. ಆದರೆ ಈಗ ಅದರ ಅರಿವು ದರ್ಶನ್‌ಗೆ ಆದಂತೆ ಕಾಣುತ್ತಿದೆ ಎಂದು ತಿಳಿದುಬಂದಿದೆ. ಯಾಕೆಂದರೆ ಭೇಟಿ ಮಾಡಲೇಬೇಕು ಎಂದು ಪವಿತ್ರಾ ಗೌಡ ದರ್ಶನ್‌ಗೆ ಮನವಿ ಮಾಡುತ್ತಲೇ ಇದ್ದಾರಂತೆ. ಆದರೆ ದರ್ಶನ್‌ ಮಾತ್ರ ಬೇಡ ನಿನ್ನ ಪಾಡಿಗೆ ನೀನು ಇರವ್ವ ಎಂಬಂತೆ ಆ ಮನವಿಯನ್ನು ನಯವಾಗಿಯೇ ತಿರಸ್ಕಾರ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.ಇಬ್ಬರೂ ಒಂದೇ ಜೈಲಿನಲ್ಲಿ ಇದ್ದರೂ ಸಹ ಪರಸ್ಪರ ಭೇಟಿ ಆಗಿಲ್ಲ ಎನ್ನಲಾಗಿದೆ. ಅದಾಗ್ಯೂ ಕಾನೂನಿನ ಅವಕಾಶಗಳನ್ನು ಬಳಕೆ ಮಾಡಿಕೊಂಡು ದರ್ಶನ್‌ ರನ್ನು ಭೇಟಿಯಾಗಲು ಪವಿತ್ರಗೌಡ ಶತ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ ಎಂಬ ಮಾಹಿತಿ ಇದೆ. ಆದರೆ ದರ್ಶನ್‌ ಮಾತ್ರ ಇದಕ್ಕೆ ಅನುಕೂಲ ಮಾಡಿಕೊಟ್ಟಿಲ್ಲ. ಪರಿಣಾಮ ದರ್ಶನ್‌ಗೆ ಈಗ ಪವಿತ್ರಾ ಮೇಲೆ ಕೋಪ ಬಂದಂತೆ ಕಾಣುತ್ತಿದೆ.ಡಿಜಿಪಿ ಅಲೋಕ್ ಕುಮಾರ್ ಅವರು ಜೈಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಅವರು ಅವಕಾಶ ಕೇಳಿದ್ದಾರೆ. ಈ ಸಮಯದಲ್ಲಿ ಅವರು ಕಾನೂನಿನಲ್ಲಿ ಅವಕಾಶ ನೋಡಿಕೊಂಡು ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ. ಇದಾದ ನಂತರ ನಿರಂತರವಾಗಿ ದರ್ಶನ್‌ ಅವರನ್ನು ಭೇಟಿ ಮಾಡಲು ಪವಿತ್ರಾ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ.ಈ ಪ್ರಕರಣದ ವಿಚಾರಣೆ ಆರಂಭವಾಗಿರುವುದರಿಂದ ಸಾಕ್ಷ್ಯಗಳ ಮುಂದೆ ತನ್ನನ್ನು ತಾನು ಸಮರ್ಥಿಸಿಕೊಳ್ಳುವುದು ಪವಿತ್ರಾ ಗೌಡಗೆ ಸವಾಲಾಗಿದೆ. ಅಷ್ಟೇ ಅಲ್ಲದೆ, ಜೈಲು ಪಾಲಾದ ನಂತರ ಪವಿತ್ರಾಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸಲು ಹಣದ ಅಗತ್ಯವಿದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಜೈಲಿಗೆ ಭೇಟಿ ನೀಡಿದ್ದ ಡಿಜಿಪಿ (ಕಾರಾಗೃಹ) ಅಲೋಕ್ ಕುಮಾರ್ ಅವರ ಬಳಿ ಪವಿತ್ರಾ ಗೌಡ ದರ್ಶನ್ ಭೇಟಿಗೆ ಅವಕಾಶ ಕಲ್ಪಿಸಿಕೊಡುವಂತೆ ಕಣ್ಣೀರು ಹಾಕಿದ್ದಾರೆ.ಡಿಜಿಪಿ ಅಲೋಕ್ ಕುಮಾರ್ ಅವರು ಜೈಲು ಭೇಟಿಗೆ ಆಗಮಿಸಿದಾಗ ಸೆಲ್‌ನಲ್ಲಿದ್ದ ಪವಿತ್ರಾ ಗೌಡ ಅವರು, ‘ಪ್ಲೀಸ್ ಸಾರ್, ಟ್ರಯಲ್ ಶುರುವಾಗಿದೆ, ಒಮ್ಮೆ ದರ್ಶನ್ ಭೇಟಿ ಮಾಡಿಸಿ, ನನ್ನ ಕಷ್ಟ ಹೇಳಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಅಲೋಕ್ ಕುಮಾರ್ ಕಾನೂನಿನ ಚೌಕಟ್ಟಿನಲ್ಲಿ ಅವಕಾಶವಿದೆಯೇ ಎಂದು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.ಪವಿತ್ರಾ ಗೌಡ ಜೈಲಿನ ಸಿಬ್ಬಂದಿಗಳ ಮೂಲಕ ದರ್ಶನ್‌ಗೆ ಹಲವು ಸಂದೇಶಗಳನ್ನು ರವಾನಿಸಿದ್ದಾರೆ. ‘ಕಾನೂನು ಹೋರಾಟಕ್ಕೆ 20 ಲಕ್ಷ ರೂಪಾಯಿ ಹಣದ ಸಹಾಯ ಬೇಕು’ ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ
ಆದರೆ, ಇದಕ್ಕೆ ದರ್ಶನ್ ಮಾತ್ರ ಪವಿತ್ರಾ ಗೌಡ ಮೇಲೆ ಕೆಂಡಾಮಂಡಲವಾಗಿದ್ದಾರೆ. ‘ನಿನ್ನಿಂದಲೇ ನಾನು ಇಂದು ಈ ಪರಿಸ್ಥಿತಿಗೆ ಬಂದಿದ್ದೇನೆ’ ಎಂಬ ಆಕ್ರೋಶ ಹೊರಹಾಕಿರುವ ದರ್ಶನ್, ಯಾವುದೇ ಕಾರಣಕ್ಕೂ ಪವಿತ್ರಾರನ್ನು ಭೇಟಿಯಾಗುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಪ್ರಕರಣ?

TAGGED:let Darshan meet once; why did the DGP refuse even though Pavithra Gowda begged her repeatedly!Please sir
Share This Article
Facebook Twitter Copy Link Print
Previous Article ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ
Next Article ಒಂದು ತಿಂಗಳಲ್ಲಿ ಮನದಾಸೆ ಈಡೇರಿಸುವ ಬಗ್ಗೆ ದೇವಿಯಿಂದ ವಾಗ್ದಾನ; ಡಿಕೆಶಿಗೆ ಹೂವಿನ ವರ ಕೊಟ್ಟ ಅಂಕೋಲಾ ‘ಜಗದೀಶ್ವರಿ’!

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?