Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಳಗಾವಿ: ವಿಧಾನ ಮಂಡಳ ಅಧಿವೇಶನದಲ್ಲಿ ಭಾಗಿಯಾಗಿ ಮಧ್ಯಾಹ್ನ ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಇಂಧನ ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ಶುಕ್ರವಾರ ಬೆಂಗಳೂರಿಗೆ ಹೋಗುವಾಗ ಪೈಲಟ್ ಹೆಲಿಕಾಪ್ಟರ್ನಲ್ಲಿನ ದೋಷ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಳಿ ತುರ್ತು ಭೂಸ್ಪರ್ಶ ಮಾಡಿದ್ದಾರೆ.
ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ, ಸಚಿವರು ಸುರಕ್ಷಿತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಬೆಂಗಳೂರು ಕಡೆ ಬರುವಾಗ ಬಲವಾದ ಗಾಳಿ ಮತ್ತು ಪ್ರತಿಕೂಲ ಹವಾಮಾನದಿಂದ ಮುಂದೆ ಸಾಗದೆ ಚಿಕ್ಕಮಗಳೂರು ಬಳಿಯ ಖಾಲಿ ಜಮೀನಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ ಎನ್ನಲಾಗಿದೆ.
ಇನ್ಮುಂದೆ ಟಿಕೆಟ್ ಅನ್ನು ಮೊಬೈಲ್ ನಲ್ಲಿ ತೋರಿಸಿದ್ರೆ ಸಾಲಲ್ಲ..ಬದಲಾಗಿ ಈ ರೀತಿ ಮಾಡಬೇಕು